ಬ್ರೇಕಿಂಗ್ ನ್ಯೂಸ್
05-06-25 10:10 am Mangalore Correspondent ಕರಾವಳಿ
ಮಂಗಳೂರು, ಜೂನ್ 5: ಕೇಸರಿ ಕಟ್ಟಿಕೊಂಡು ಹೊಡೆದ್ಕೊಂಡರೆ ಹಿಂದು ಮುಖಂಡ, ಹಿಂದು ಕಾರ್ಯಕರ್ತ ಆಗುತ್ತಾನಾ.. ರೌಡಿಶೀಟರ್, ಕೊಲೆ ಮಾಡಿದವರು, ಸುಲಿಗೆ ಮಾಡಿದವರನ್ನು ಹಿಂದು ಕಾರ್ಯಕರ್ತ ಅನ್ನುತ್ತೀರಾ.. ಕಾಂಗ್ರೆಸ್ ಸರ್ಕಾರ ಇರುವಾಗ ಮಾತ್ರ ಹಿಂದುಗಳಿಗೆ ತೊಂದರೆ ಆಗಿದ್ದಾ.. ಹಿಂದು ನಾಯಕ ಅನಿಸಿಕೊಳ್ಳಲು ರೌಡಿಶೀಟರ್, ಗಾಂಜಾ, ಅನೈತಿಕ ಚಟುವಟಿಕೆ ಮಾಡಿಕೊಂಡಿದ್ದವರೇ ಆಗಬೇಕಾ.. ಹೀಗೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪೊಲೀಸರು ಬಿಡುಗಡೆ ಮಾಡಿರುವ ಗಡೀಪಾರು ಪಟ್ಟಿಯಲ್ಲಿ ಕೇವಲ ಹತ್ತು ಕಿಮೀ ವ್ಯಾಪ್ತಿಯವರೇ ಹೆಚ್ಚಿದ್ದಾರೆ. ಇಡೀ ಕರಾವಳಿಗೆ ಹತ್ತು ಕಿಮೀ ವ್ಯಾಪ್ತಿಯ ಕೋಮು ಹಿಂಸೆಯ ಜನರಿಂದಾಗಿ ಕೆಟ್ಟ ಹೆಸರು ಬರ್ತಾ ಇದೆ. 30 ವರ್ಷಗಳ ಹಿಂದೆ ಬಿಜೆಪಿಯವರು ಬಿತ್ತಿದ ಕೋಮು ವೈಷಮ್ಯದ ಬೀಜ ಈಗ ಹೆಮ್ಮರವಾಗಿ ಬೆಳೆದಿದೆ. ಕೋಮು ಗಲಭೆ, ಕೋಮು ಸಂಘರ್ಷ, ಕೋಮು ಹತ್ಯೆ ಬೇರೆ ಬೇರೆ. ಇಲ್ಲಿ ಆಗುತ್ತಿರುವುದು ಕೋಮು ಹತ್ಯೆ ಮಾತ್ರ. ಆದರೆ ಇಡೀ ಕರಾವಳಿಗೆ ಇದರ ನೆಪದಲ್ಲಿ ಮಸಿ ಬಳಿಯಲಾಗುತ್ತಿದೆ. ಮಾಧ್ಯಮದಲ್ಲಿ ಇಡೀ ಕರಾವಳಿಯಲ್ಲಿ ಇಂಥದ್ದು ಆಗ್ತಾ ಇದೆಯೆಂದು ಬಣ್ಣ ಹಚ್ಚಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಕಾರವಾರದಿಂದ ಕಾಸರಗೋಡು ವರೆಗೆ ನಮ್ಮ ಕರಾವಳಿಯಿದ್ದು, ಮಂಗಳೂರಿನಲ್ಲಿ ಮಾತ್ರ ಈ ರೀತಿಯ ಕೋಮು ಹಿಂಸೆಯ ಕೃತ್ಯಗಳು ನಡೆಯುತ್ತಿವೆ. ಬೆಳ್ತಂಗಡಿ, ಸುಳ್ಯ, ಉಡುಪಿ, ಕಾರವಾರ ಬೇರೆಲ್ಲಿಯೂ ನಡೀತಾ ಇಲ್ಲ. ಮಂಗಳೂರಿನಲ್ಲು ಹತ್ತು ಕಿಮೀ ರೇಡಿಯಸ್ ವ್ಯಾಪ್ತಿಯಲ್ಲಿ ಇಂತಹ ಕೃತ್ಯಗಳು ಹೆಚ್ಚಿದ್ದು, ಇದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕಬೇಕಾಗಿದೆ. ಈ ನಡುವೆ, ನಾವೆಲ್ಲ ಹಿಂದುಗಳಲ್ವಾ ಎನ್ನುವ ಪ್ರಶ್ನೆ ಕೇಳಬೇಕಾಗಿದೆ. ಇವರ ಪರಿವಾರದಲ್ಲಿ 50-60 ದಳಗಳಿವೆ, ಅವನ್ನು ಹೇಳಿಕೊಳ್ಳಲಿ. ಅದು ಬಿಟ್ಟು ಹಿಂದು ನಾಯಕ, ಹಿಂದು ಕಾರ್ಯಕರ್ತ ಎಂದು ಹೇಳಿಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು. ಇದಕ್ಕಾಗಿ ನಾವೊಂದು ಸಮಿತಿ ಮಾಡುತ್ತಿದ್ದೇವೆ. ಪ್ರತಿ ತಾಲೂಕಿನಲ್ಲಿ ಇದರ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಸದಾಶಿವ ಉಳ್ಳಾಲ್, ಪದ್ಮರಾಜ್ ಆರ್ ಪೂಜಾರಿ, ಜಿ.ಎ ಬಾವ, ವಿಶ್ವಾಸ್ ಕುಮಾರ್ ದಾಸ್, ಪ್ರಕಾಶ್ ಸಾಲಿಯಾನ್, ಶುಭೋದಯ ಆಳ್ವಾ, ಲಾರೆನ್ಸ್ ಡಿಸೋಜ, ಅನಿಲ್ ಪೂಜಾರಿ, ನೀರಜ್ ಪಾಲ್, ಮಹಮ್ಮದ್ ಅಲಿ ಪುತ್ತೂರು ಉಪಸ್ಥಿತರಿದ್ದರು
Mangalore Wearing Saffron Doesn’t Make One a Hindu Leader, Manjunath Bhandary Slams Rise of Criminal Elements in Coastal Communal Politics.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm