ಬ್ರೇಕಿಂಗ್ ನ್ಯೂಸ್
05-06-25 03:05 pm HK News Desk ಕರಾವಳಿ
ಮಂಗಳೂರು, ಜೂನ್ 5: ಅರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ. ಯಾವುದೋ ಒಂದು ಭಾವನೆ ಮತ್ತು ಹರ್ಷೋದ್ಘಾರದಲ್ಲಿ ವಿಜಯೋತ್ಸವ ಮಾಡುವಾಗ ಘಟನೆ ನಡೆದಿದೆ. ಏನಾಗಿದೆ ಏನಾಗಿಲ್ಲ ಅನ್ನೋದನ್ನ ಮುಖ್ಯಮಂತ್ರಿಗಳು ಹೇಳಬೇಕಾಗುತ್ತದೆ. ಐಪಿಎಲ್ ನಡೆಸೋರು ಕರೋಡ್ ಪತಿಗಳಲ್ಲ, ಸಾವಿರಾರು ಕೋಟಿ ಮಾಲೀಕರು. ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಕಡೆಯಿಂದ ಒಂದೊಂದು ಕೋಟಿ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಮಾಡ್ತೀನಿ, ರಾಜ್ಯ ಸರ್ಕಾರದಿಂದಲೇ ಬಿಸಿಸಿಐನಿಂದ ಒಂದು ಕೋಟಿ ಕೊಡಿಸಬೇಕು. ಎಲ್ಲರೂ ದುಃಖದಲ್ಲಿದ್ದಾರೆ, ಹಾಗಾಗಿ ಏನೂ ಹೇಳಲು ಹೋಗಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ದುಃಖ ತಡೆದುಕೊಳ್ಳಲು ಭಗವಂತ ಶಕ್ತಿ ಕೊಡಲಿ. ಸರ್ಕಾರ ಏನ್ ಮಾಡಿದೆ, ಏನ್ ಮಾಡಿಲ್ಲ ಅಂತ ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳಲು ಆಗಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ಈ ಬಗ್ಗೆ ತಿಳುವಳಿಕೆ ಕೊಡಬೇಕು.
ಚಿನ್ನಸ್ವಾಮಿ ಕ್ರೀಡಾಂಗಣದ ಕೆಪಾಸಿಟಿ ಇರೋದು 35 ಸಾವಿರ ಜನ ಮಾತ್ರ. ಉಚಿತ ಅಂದ ತಕ್ಷಣ ಮೂರು ಲಕ್ಷ ಜನ ಅಲ್ಲಿಗೆ ಬಂದಿದಾರೆ. ಸಾವಿರಕ್ಕೆ ಒಂದು ಪೊಲೀಸ್ ನಮ್ಮಲ್ಲಿರೋದು, ಎಲ್ಲೋ ಒಂದು ಕಡೆ ಹೆಚ್ಚು ಕಮ್ಮಿ ಆಗಿದೆ. ಸಾವು ಹೊರಗಡೆ ಆದಾಗ ಒಳಗಡೆ ಸೆಲೆಬ್ರೇಷನ್ ನಿಲ್ಲಿಸಬೇಕಾಗಿತ್ತು. ಅಭಿಮಾನಿಗಳು ಬರೋವಾಗ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಯೋಚನೆ ಮಾಡಬೇಕಾಗಿತ್ತು.
ಹೈಕೋರ್ಟ್ ಗೆ ಸುಮೊಟೋ ಕೇಸ್ ಮಾಡುವ ಎಲ್ಲಾ ಹಕ್ಕಿದೆ, ಅದೇ ಥರ ಎಲ್ಲದರಲ್ಲೂ ಮಾಡಿದರೆ ಒಳ್ಳೆಯದು. ಹನ್ನೊಂದು ಜನರ ಸಾವಿಗೆ ಯಾರು ಹೊಣೆ ಅಂತ ಸರ್ಕಾರ ಹೇಳಬೇಕು. ಇದು ಸರ್ಕಾರ ನಡೆಸಿರೋ ಕ್ರಿಕೆಟ್ ಅಲ್ಲ. ವಿಧಾನಸೌಧ ಬಳಿ ಯಾವುದೇ ಘಟನೆ ಆಗಿಲ್ಲ. ಇನ್ಜು ಸ್ಟೇಡಿಯಂನವರು ಕಾರ್ಯಕ್ರಮ ನಡೆಸುವಾಗ ಸ್ವಲ್ಪ ಯೋಚನೆ ಮಾಡಿ ನಡೆಸಬೇಕಿತ್ತು. ಅಮಾಯಕರು, ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಹೊರಬೇಕು ಎಂದು ಹೇಳಿದರು.
B K Hariprasad in Mangalore Demands Rs 1 Crore Compensation from BCCI for Each Victim of IPL Celebration Tragedy
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am