ಬ್ರೇಕಿಂಗ್ ನ್ಯೂಸ್
05-06-25 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 5 : ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಪ್ರಾರಂಭಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ.
ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ದೃಷ್ಟಿಯಿಂದ ದೇಶ -ವಿದೇಶಗಳಿಂದಲೂ ಸಾವಿರಾರು ಜನ ಪ್ರತಿನಿತ್ಯ ನಗರಕ್ಕೆ ಭೇಟಿ ನೀಡುತ್ತಾರೆ. ಮಂಗಳೂರು ನಗರದ ಕೇಂದ್ರ ಭಾಗದಲ್ಲಿರುವ ಬಸ್ ನಿಲ್ದಾಣವು 1980ರಲ್ಲಿ ಮಂಜೂರಾಗಿ 83ರಲ್ಲಿ ಅಂದಾಜು 60 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿರುತ್ತದೆ. ಪ್ರಸ್ತುತ ಬಸ್ ನಿಲ್ದಾಣವು 3 ಎಕರೆ 60 ಸೆಂಟ್ಸ್ ವಿಸ್ತೀರ್ಣದ ಪ್ರದೇಶವನ್ನು ಹೊಂದಿದ್ದು, 4702.94 ಚ. ಮೀ ವಿಸ್ತೀರ್ಣದ ನಿಲ್ದಾಣ ಕಟ್ಟಡ, 814.82 ಚ. ಮೀ ವಾಣಿಜ್ಯ ಪ್ರದೇಶ, 103 ಚ.ಮೀ ದ್ವಿಚಕ್ರ ವಾಹನ ಪಾರ್ಕಿಂಗ್, 608.50 ಚ. ಮೀ ಕಾರ್ ಪಾರ್ಕಿಂಗ್, 171.92 ಚ. ಮೀ ರಿಕ್ಷಾ ನಿಲ್ದಾಣ, 1564.82 ಚ.ಮೀ ವಿಶ್ರಾಂತಿ ಕೊಠಡಿಗಳ ಸಾಮರ್ಥ್ಯ ಹೊಂದಿದೆ. ಕಳೆದ 39 ವರ್ಷಗಳಲ್ಲಿ ಅಲ್ಪ ಸ್ವಲ್ಪ ಅನುದಾನದಿಂದ ನಿಲ್ದಾಣವನ್ನು ನಿರ್ವಹಣೆ ಮಾಡಲಾಗಿದೆಯೇ ಹೊರತು ಆಧುನಿಕ ಸೌಲಭ್ಯಗಳೊಂದಿಗೆ ಉನ್ನತೀಕರಿಸುವ ಯಾವುದೇ ಪ್ರಯತ್ನಗಳಾಗಿರುವುದಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ನಿಲ್ದಾಣಕ್ಕೆ ಪ್ರತಿನಿತ್ಯ ವಿವಿಧ ವಿಭಾಗಗಳಿಂದ ಅಂದಾಜು 515 ಬಸ್ಗಳು ಬಂದು ಹೋಗುತ್ತಿದ್ದು, ಸರಿಸುಮಾರು 25 ಸಾವಿರ ಪ್ರಯಾಣಿಕರು ನಿತ್ಯ ನಿಲ್ದಾಣವನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅವಲಂಬಿಸಿದ್ದಾರೆ.
ರಾಜ್ಯದ ಬೊಕ್ಕಸಕ್ಕೆ ವಿವಿಧ ಉದ್ಯಮಗಳ ಮೂಲಕ ಅತೀ ಹೆಚ್ಚು ತೆರಿಗೆ ಪಾವತಿಸುವ ಜನರು ಹಾಗೂ ಸಂಸ್ಥೆಗಳನ್ನು ಹೊಂದಿರುವ ನಗರಗಳಲ್ಲಿ ಒಂದಾಗಿರುವ ಮಂಗಳೂರಿನಲ್ಲಿ, ಕಾಲಮಾನಕ್ಕೆ ತಕ್ಕಂತೆ ನಿಲ್ದಾಣದ ಸಾಮರ್ಥ್ಯವನ್ನು ಮೇಲ್ದರ್ಜೆಗೇರಿಸಿ, ಇತರೇ ರಾಜ್ಯದಲ್ಲಿರುವಂತೆ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಿಸಬೇಕೆಂಬುದು ಮಂಗಳೂರಿನ ನಿವಾಸಿಗಳ ಹಾಗೂ ಪಕ್ಷದ ಮುಖಂಡರ ಆಗ್ರಹವಾಗಿದೆ. ಆದ್ದರಿಂದ ಮಂಗಳೂರು ಬಸ್ ನಿಲ್ದಾಣವನ್ನು ಇತರೇ ಜಿಲ್ಲೆಯಲ್ಲಿರುವಂತೆ, ಅಂದಾಜು 120 ಕೋಟಿ ರೂಪಾಯಿ ಅನುದಾನದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸುವುದರ ಜೊತೆಗೆ ನಗರದಲ್ಲಿ ಎಲೆಕ್ಟ್ರಿಕ್ ಬಸ್ಗಳ ಸಂಚಾರವನ್ನು ಪ್ರಾರಂಭಿಸಬೇಕಾಗಿ ಈ ಮೂಲಕ ತಮ್ಮನ್ನು ಮನವಿ ಮಾಡುವುದಾಗಿ ಭಂಡಾರಿ ಹೇಳಿದ್ದಾರೆ.
Manjunath Bhandari Urges Transport Minister to Upgrade Mangaluru Bus Stand into Hi Tech Hub and Introduce Electric Buses.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm