ಬ್ರೇಕಿಂಗ್ ನ್ಯೂಸ್
06-06-25 05:33 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲು ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಎಸಿ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ.
ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡುವುದಕ್ಕೆ ಇರುವ ಮಾನದಂಡಗಳೇನು ಮತ್ತು ಪೊಲೀಸ್ ಇಲಾಖೆಯಲ್ಲಿ ಮಾಡಿಕೊಂಡಿರುವ ಆರೋಪ ಪಟ್ಟಿ ಅಥವಾ ಆ ಕುರಿತ ದಾಖಲೆ ಏನಿದೆ ಎಂದು ವಕೀಲರು ಉಪ ವಿಭಾಗಾಧಿಕಾರಿ ಮುಂದೆ ಪ್ರಶ್ನೆ ಮಾಡಿದ್ದಾರೆ. ಪುತ್ತಿಲ ಅವರಿಗೆ ನೀಡಿದ್ದ ನೋಟೀಸಿನಲ್ಲಿ ಕಳೆದ ಬಾರಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧಿಸಿದ್ದಾಗ, ಯೋಗಿ ಮತ್ತು ಮೋದಿಯವರ ಫೋಟೋ ಬಳಸಿದ್ದಕ್ಕಾಗಿ ಮಾಡಿದ್ದ ಕೇಸು, 2013ರಲ್ಲಿ ದಾಖಲಾಗಿದ್ದ ಕೇಸಿನ ವಿವರಗಳಿದ್ದವು. ಇವೆರಡೂ ಪ್ರಕರಣಗಳು ಕೋರ್ಟಿನಲ್ಲಿ ಖುಲಾಸೆಗೊಂಡಿವೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಎಸಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸಲು ಮುಂದಾಗಿಲ್ಲ. ಇದರಂತೆ, ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ. ಇದೇ ವೇಳೆ, ಇಂದು ಪುತ್ತೂರು ಎಸಿ ಕೋರ್ಟಿನಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
Setback for Mangalore Police in Arun Puthila Externment Case, AC Court Seeks Proper Documentation, Hearing Postponed.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm