ಬ್ರೇಕಿಂಗ್ ನ್ಯೂಸ್
06-06-25 05:33 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲು ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಎಸಿ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ.
ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡುವುದಕ್ಕೆ ಇರುವ ಮಾನದಂಡಗಳೇನು ಮತ್ತು ಪೊಲೀಸ್ ಇಲಾಖೆಯಲ್ಲಿ ಮಾಡಿಕೊಂಡಿರುವ ಆರೋಪ ಪಟ್ಟಿ ಅಥವಾ ಆ ಕುರಿತ ದಾಖಲೆ ಏನಿದೆ ಎಂದು ವಕೀಲರು ಉಪ ವಿಭಾಗಾಧಿಕಾರಿ ಮುಂದೆ ಪ್ರಶ್ನೆ ಮಾಡಿದ್ದಾರೆ. ಪುತ್ತಿಲ ಅವರಿಗೆ ನೀಡಿದ್ದ ನೋಟೀಸಿನಲ್ಲಿ ಕಳೆದ ಬಾರಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧಿಸಿದ್ದಾಗ, ಯೋಗಿ ಮತ್ತು ಮೋದಿಯವರ ಫೋಟೋ ಬಳಸಿದ್ದಕ್ಕಾಗಿ ಮಾಡಿದ್ದ ಕೇಸು, 2013ರಲ್ಲಿ ದಾಖಲಾಗಿದ್ದ ಕೇಸಿನ ವಿವರಗಳಿದ್ದವು. ಇವೆರಡೂ ಪ್ರಕರಣಗಳು ಕೋರ್ಟಿನಲ್ಲಿ ಖುಲಾಸೆಗೊಂಡಿವೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಎಸಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸಲು ಮುಂದಾಗಿಲ್ಲ. ಇದರಂತೆ, ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ. ಇದೇ ವೇಳೆ, ಇಂದು ಪುತ್ತೂರು ಎಸಿ ಕೋರ್ಟಿನಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
Setback for Mangalore Police in Arun Puthila Externment Case, AC Court Seeks Proper Documentation, Hearing Postponed.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm