ಬ್ರೇಕಿಂಗ್ ನ್ಯೂಸ್
06-06-25 07:20 pm Mangalore Correspondent ಕರಾವಳಿ
ಮಂಗಳೂರು, ಜೂ.6 : ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದ್ದು ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ಚೆಕ್ ವಿತರಿಸಿದರು.
ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಇಬ್ಬರು ಮೀನುಗಾರರಿಗಾಗಿ ಶೋಧ ಕಾರ್ಯ ಇನ್ನೂ ನಡೆಯುತ್ತಿದೆ. ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ತಿಳಿಸಿದರು. ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರರ ಕುಟುಂಬಗಳಿಗೆ ಇದುವರೆಗೆ 8 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ರಾಜ್ಯ ಸರಕಾರ ಇದನ್ನು 10 ಲಕ್ಷ ರೂ.ಗೆ ಏರಿಸಿದೆ ಎಂದು ಸಚಿವರು ತಿಳಿಸಿದರು.



ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಐವನ್ ಡಿಸೋಜಾ, ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್, ಜಂಟಿ ನಿರ್ದೇಶಕ ಸಿದ್ಧಯ್ಯ, ಉಪ ನಿರ್ದೇಶಕ ದಿಲೀಪ್ ಕುಮಾರ್, ಮೀನುಗಾರ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೀನುಗಾರರ ಸುರಕ್ಷತೆ ; ಸಚಿವರಿಂದ ಸಭೆ
ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನ ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.
Mangalore Minister Mankal Vaidya Visits Homes of Missing Bengre Fishermen, Hands Over 10 Lakh Compensation Cheques to Each Family.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm