ಬ್ರೇಕಿಂಗ್ ನ್ಯೂಸ್
06-06-25 07:20 pm Mangalore Correspondent ಕರಾವಳಿ
ಮಂಗಳೂರು, ಜೂ.6 : ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದ್ದು ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ಚೆಕ್ ವಿತರಿಸಿದರು.
ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಇಬ್ಬರು ಮೀನುಗಾರರಿಗಾಗಿ ಶೋಧ ಕಾರ್ಯ ಇನ್ನೂ ನಡೆಯುತ್ತಿದೆ. ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ತಿಳಿಸಿದರು. ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರರ ಕುಟುಂಬಗಳಿಗೆ ಇದುವರೆಗೆ 8 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ರಾಜ್ಯ ಸರಕಾರ ಇದನ್ನು 10 ಲಕ್ಷ ರೂ.ಗೆ ಏರಿಸಿದೆ ಎಂದು ಸಚಿವರು ತಿಳಿಸಿದರು.



ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಐವನ್ ಡಿಸೋಜಾ, ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್, ಜಂಟಿ ನಿರ್ದೇಶಕ ಸಿದ್ಧಯ್ಯ, ಉಪ ನಿರ್ದೇಶಕ ದಿಲೀಪ್ ಕುಮಾರ್, ಮೀನುಗಾರ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೀನುಗಾರರ ಸುರಕ್ಷತೆ ; ಸಚಿವರಿಂದ ಸಭೆ
ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನ ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.
Mangalore Minister Mankal Vaidya Visits Homes of Missing Bengre Fishermen, Hands Over 10 Lakh Compensation Cheques to Each Family.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm