ಬ್ರೇಕಿಂಗ್ ನ್ಯೂಸ್
06-06-25 09:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6 : ಗೋವಾದಲ್ಲಿ ಇತ್ತೀಚಿಗೆ ಆಯೋಜಿಸಿದ್ದ "ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025" ಸ್ಪರ್ಧೆಯಲ್ಲಿ “ಪ್ರಿನ್ಸ್ ಆಫ್ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್” ಎಂಬ ಪ್ರಶಸ್ತಿಗೆ ಮಂಗಳೂರಿನ ಎಂಟು ವರ್ಷದ ಹುಡುಗ ರುಶಭ್ ರಾವ್ ಆಯ್ಕೆಯಾಗಿದ್ದಾನೆ.
ಮಂಗಳೂರಿನಲ್ಲಿ ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ರಕ್ಷಿತ್ ರಾವ್ ಮತ್ತು ಅಶ್ವಿನಿ ದಂಪತಿಯ ಪುತ್ರನಾಗಿರುವ ರುಶಭ್ ರಾವ್, ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ. ಆರು ವರ್ಷದಲ್ಲೇ ಮಾಡೆಲಿಂಗ್ ಪ್ರವೇಶಿಸಿದ್ದ ರುಶಭ್, ಉತ್ತಮ ನೃತ್ಯ ಕೌಶಲ್ಯ ಮತ್ತು ಅಭಿನಯದಿಂದ ಗಮನ ಸೆಳೆದಿದ್ದಾನೆ. ಮೂರು ತುಳು ಚಲನಚಿತ್ರಗಳು ಮತ್ತು ಒಂದು ಕನ್ನಡ ಧಾರಾವಾಹಿಯಲ್ಲಿ ಬಾಲನಟನಾಗಿ ಅಭಿನಯ ತೋರಿಸಿದ್ದಾನೆ.

ಗೋವಾದಲ್ಲಿ ನಡೆದ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಲ್ಲದೇ, ಪ್ರಿನ್ಸ್ ಆಫ್ ಕರ್ನಾಟಕ, ಸೂಪರ್ ಟ್ಯಾಲೆಂಟ್" (ಪ್ರತಿಭಾ ಪ್ರದರ್ಶನ ವಿಭಾಗದಲ್ಲಿ ನೃತ್ಯ) ಬೆಸ್ಟ್ ಕಾಸ್ಟ್ಯೂಮ್" (ಅತ್ಯುತ್ತಮ ಉಡುಪು) ಪ್ರಶಸ್ತಿಗೂ ಆಯ್ಕೆಯಾಗಿದ್ದಾನೆ. ಫ್ಯಾಷನ್ ನಿರ್ದೇಶಕಿ ಯಶಸ್ವಿನಿ ದೇವಾಡಿಗ, ನೃತ್ಯ ಗುರು ನವೀನ್ ಶೆಟ್ಟಿ ಅವರಿಂದ ನೃತ್ಯ ತರಬೇತಿ ಪಡೆಯುತ್ತಿದ್ದಾನೆ.
ಆಗಸ್ಟ್ ತಿಂಗಳಲ್ಲಿ ವಿಯಟ್ನಾಂನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ರುಶಭ್ ಭಾರತ ನ್ನು ಪ್ರತಿನಿಧಿಸಲಿದ್ದಾನೆ.
Mangalore Rushabh Rao Shines at Junior Model International 2025; To Represent India Globally.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm