ಬ್ರೇಕಿಂಗ್ ನ್ಯೂಸ್
07-06-25 05:37 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : ದೇರಳಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಅದೇ ಕಾಲೇಜಿನ ಪಿಜಿ ವಿದ್ಯಾರ್ಥಿನಿಯೊಬ್ಬಳನ್ನು ವಶಕ್ಕೆ ಪಡೆದಿದ್ದಾರೆ. ಬಾಂಬ್ ಬೆದರಿಕೆ ಬಗ್ಗೆ ದೂರು ನೀಡಿದವಳೇ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಭಾರತ ಮೂಲದ ಚಲಸಾನಿ ಮೋನಿಕಾ ಚೌಧರಿ ವಶಕ್ಕೆ ಪಡೆದ ವಿದ್ಯಾರ್ಥಿನಿಯಾಗಿದ್ದು ಈಕೆ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಳು. ಮೇ 4ರಂದು ಪಿಜಿ ವಿಷಯದಲ್ಲಿ ಸೆಮಿನಾರ್ ಮಂಡನೆ ಮಾಡುವುದಕ್ಕೆ ಟಾಸ್ಕ್ ಕೊಡಲಾಗಿತ್ತು. ಸೆಮಿನಾರ್ ತಪ್ಪಿಸುವುದಕ್ಕಾಗಿ ಮೋನಿಕಾ ಚೌಧರಿ ಅದೇ ದಿನ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿರುವುದಾಗಿ ಕಾಲೇಜು ಸಿಬಂದಿಗೆ ಸುಳ್ಳು ಹೇಳಿದ್ದಳು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.


ತನ್ನ ಮೊಬೈಲಿಗೆ ನಾಲ್ಕೈದು ಬಾರಿ ಕರೆ ಮಾಡಿ ಯಾರೋ ಬೆದರಿಕೆ ಒಡ್ಡಿದ್ದಾರೆಂದು ಹೇಳಿದ್ದಳು. ಆನಂತರ, ಕಾಲೇಜು ಆಡಳಿತದ ಸೂಚನೆಯಂತೆ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು. ಈಕೆಗೆ ಫೋನ್ ಕರೆ ಬಂದಿದ್ದರಿಂದ ವಿದ್ಯಾರ್ಥಿನಿಯನ್ನೇ ದೂರುದಾರಳೆಂದು ಗುರುತಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ಘಟನೆ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.
ಪೊಲೀಸರು ವಿದ್ಯಾರ್ಥಿನಿಯನ್ನು ತನಿಖೆ ನಡೆಸಿದಾಗ ಪೂರಕ ಲಭಿಸದ್ದರಿಂದ ಆಕೆಯ ಬಗ್ಗೆಯೇ ತನಿಖೆ ನಡೆಸಲಾಗಿತ್ತು. ಆಕೆ ಅಲ್ಲಿಯೇ ಪಿಜಿ ವ್ಯಾಸಂಗ ನಡೆಸುತ್ತಿರುವುದು ಮತ್ತು ಅದೇ ದಿನ ಸೆಮಿನಾರ್ ಇದ್ದ ಮಾಹಿತಿಯೂ ಲಭಿಸಿತ್ತು.
ಸೆಮಿನಾರ್ ಹಿಂದೆ ಹಾಕಲಿಕ್ಕಾಗಿ ಹೈದರಾಬಾದಿನ ಸ್ನೇಹಿತನ ಮೊಬೈಲ್ ಗೆ ಆಸ್ಪತ್ರೆಯ ಸ್ಥಿರ ದೂರವಾಣಿಗೆ ಕರೆ ಮಾಡುವಂತೆ ಮೆಸೇಜ್ ಹಾಕಿದ್ದಳು. ಮೆಸೇಜ್ ನೋಡಿ ಸ್ನೇಹಿತ ಕರೆ ಮಾಡಿದ್ದಾನೆ. ಆಸ್ಪತ್ರೆಯ ಸಿಬ್ಬಂದಿಗಳು ಯಾರ ಕರೆ ಎಂದು ಕೇಳಿದಾಗ ಬಾಂಬ್ ಬೆದರಿಕೆ ಎಂದು ಗುಳ್ಳೆಬ್ಬಿಸಿದ್ದಾಳೆ. ಆಕೆಯೇ ಉಳ್ಳಾಲ ಠಾಣೆಗೆ ದೂರು ನೀಡಿದ್ದಾಳೆ. ಕರೆ ಮಾಡಿದ ಸ್ನೇಹಿತ ಹೈದರಾಬಾದಿನಲ್ಲಿ ಐಟಿ ಕಂಪನಿ ಉದ್ಯೋಗಿಯಾಗಿದ್ದು ಆತನಿಗೆ ಯಾವುದೇ ವಿಚಾರ ತಿಳಿದಿಲ್ಲ ಎಂದು ಪೊಲೀಸರ ಕಡೆಯಿಂದ ತಿಳಿದುಬಂದಿದೆ.
ಸುಳ್ಳು ಮಾಹಿತಿ ನೀಡಿದ್ದಾಗಿ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಕಣಚೂರು ಆಸ್ಪತ್ರೆಯಲ್ಲಿ ಶೋಧ ನಡೆಸಿದ್ದರು. ಶೋಧ ಬಳಿಕ ಯಾವುದೇ ಸುಳಿವು ಸಿಗದ ಕಾರಣ ಹುಸಿ ಬಾಂಬ್ ಎಂದು ಸಾಬೀತಾಗಿತ್ತು.
Mangalore PG Student Arrested for Fake Bomb Threat at Kanachur Medical College, Police Say She Made the Call to Avoid Seminar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm