ಬ್ರೇಕಿಂಗ್ ನ್ಯೂಸ್
07-06-25 09:15 pm Mangalore Correspondent ಕರಾವಳಿ
ಮಂಗಳೂರು, ಜೂನ್ 7 : ಆರ್ ಸಿಬಿ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಆಗುತ್ತಿದ್ದಾಗ ರಾಜ್ಯದ ಮುಖ್ಯಮಂತ್ರಿಯಾದವರು ದೋಸೆ ತಿನ್ನುತ್ತಿದ್ದರು ಅನ್ನುವ ಸುದ್ದಿ ಸತ್ಯವೇ ಆಗಿದ್ದರೆ, ದುರಂತದಲ್ಲಿ ಮಕ್ಕಳನ್ನು ಕಳಕೊಂಡ ಕುಟುಂಬದ ಶಾಪ ತಟ್ಟುತ್ತದೆ. ದೇವರು ಕೂಡ ಕ್ಷಮಿಸಲಿಕ್ಕಿಲ್ಲ. ಆದರೆ ಆ ರೀತಿ ಆಗಿರಲಿಕ್ಕಿಲ್ಲ ಎಂದು ಭಾವಿಸುತ್ತೇನೆ ಎಂಬುದಾಗಿ ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.
ಬೆಂಗಳೂರಿನ ಕಾಲ್ತುಳಿತ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೋಸೆ ಸವಿಯುತ್ತಿದ್ದರು ಎನ್ನುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಸಿಟಿ ರವಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಯಾರೇ ಆಗಲಿ, ಇಂಥ ದುರಂತ ಆಗಿದ್ದಾಗ ದೋಸೆ ಸವಿಯುವಂಥ ಕೆಲಸ ಮಾನವೀಯತೆ ಇದ್ದವರು ಮಾಡಲಿಕ್ಕಿಲ್ಲ. ಅದು ಸತ್ಯವೇ ಆಗಿದ್ದರೆ ಇದಕ್ಕೂ ಆಫ್ರಿಕಾದಲ್ಲಿ ಮಕ್ಕಳ ಮೆದುಳನ್ನು ತಿನ್ನುವ ಇದಿ ಅಮೀನ್ ಗೂ ವ್ಯತ್ಯಾಸ ಇಲ್ಲ ಎಂದು ಟೀಕಿಸಿದ್ದಾರೆ.

ಆರ್ ಸಿಬಿ ಗೆಲುವಿನ ವಿಜಯೋತ್ಸವ ಆಚರಿಸಲು ಅದರ ಮಾಲೀಕರು ಕರ್ನಾಟಕದವರಾ. ಸಿಎಂ ಅಥವಾ ಅವರ ಕಡೆಯವರು ಇದರಲ್ಲಿ ಸೀಕ್ರೆಟ್ ಇನ್ವೆಸ್ಟ್ ಮಾಡಿದ್ದಾರೆಯೇ.. ಎಂದು ಪ್ರಶ್ನಿಸಿದ ಸಿಟಿ ರವಿ, ಅಷ್ಟು ತರಾತುರಿಯಲ್ಲಿ ವಿಜಯೋತ್ಸವ ಮಾಡುವುದಕ್ಕೇನು ದರ್ದು ಇತ್ತು. ಇವರ ಬೇಜಾವಾಬ್ದಾರಿ ತೋರಿಸದೇ ಇರುತ್ತಿದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವ ಸ್ಥಿತಿ ಬರುತ್ತಿತ್ತಾ.. ಹೊರಗಡೆ ಜೀವ ಹೋಗುತ್ತಾ ಇದ್ರೂ ಡಿಸಿಎಂ ಟ್ರೋಫಿ ಎತ್ತಿ ಕುಣೀತಾ ಇದ್ರಲ್ವಾ.. ಈ ಘಟನೆಗೆ ಯಾರು ರೆಸ್ಪಾನ್ಸಿಬಲ್. ಕಾಲ್ತುಳಿತ ಆದಾಗ ಗಾಯಾಳುಗಳನ್ನು ಪೊಲೀಸರು ಕೈಯಲ್ಲಿ ಎತ್ಕೊಂಡು ಹೋಗುವ ಸ್ಥಿತಿಯಾಗಿತ್ತಲ್ವೇ.. ಆಂಬುಲೆನ್ಸ್ ಇಟ್ಕೊಳ್ಳೋಕೂ ಯೋಗ್ಯತೆ ಇರಲಿಲ್ವಾ ಎಂದರು.
ಪೊಲೀಸ್ ಅಧಿಕಾರಿಗಳನ್ನು ಕಾರಣಕರ್ತರೆಂದು ಸಸ್ಪೆಂಡ್ ಮಾಡಿದ್ದೀರಿ. ಆರ್ ಸಿಬಿ ಗೆಲುವಿನ ವಿಜಯೋತ್ಸವ ಆಯೋಜಿಸಿದ್ದು ಕಮಿಷನರ್ ದಯಾನಂದ್. ಒಟ್ಟು ಕಾರ್ಯಕ್ರಮವನ್ನು ಅವರೇ ಮಾಡಿದ್ರು ಅಂತ ಹೊಣೆ ಎಲ್ಲ ಅವರ ತಲೆಗೆ ಕಟ್ಟಿದಂತೆ ಸಿಎಂ, ಡಿಸಿಎಂ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.
Siddaramaiah, DK Shivakumar Must Take Responsibility for RCB Stampede, Not Blame Police, CT Ravi.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm