ಬ್ರೇಕಿಂಗ್ ನ್ಯೂಸ್
09-06-25 11:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 9 : ಕೇರಳದ ಕೊಚ್ಚಿಯ ಬೇಪೂರ್ ಸಮುದ್ರ ತೀರದಿಂದ 78 ನಾಟಿಕಲ್ ಮೈಲು ದೂರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದರಲ್ಲಿದ್ದ 18 ಮಂದಿಯನ್ನು ನೌಕಾಪಡೆ ಮತ್ತು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ನಾಲ್ವರು ಸಿಬಂದಿ ನಾಪತ್ತೆಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.
ಐವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ ಇದೆಯೆಂದು ಅಧಿಕಾರಿಗಳು ತಿಳಿಸಿದ್ದು, ಅವರನ್ನು ಐಎನ್ಎಸ್ ಸೂರತ್ ಶಿಪ್ ಮೂಲಕ ಪಣಂಬೂರು ಬಂದರಿಗೆ ತರಲಾಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಯಿದೆ. ಎಂವಿ ವ್ಯಾನ್ ಹೈ 503 ಹೆಸರಿನ ಸಿಂಗಾಪುರದ ಕಂಟೇನರ್ ಹಡಗು ಶ್ರೀಲಂಕಾದ ಕೊಲಂಬೋದಿಂದ ಮುಂಬೈ ತೆರಳುತ್ತಿದ್ದಾಗ ಕೇರಳ ಸಮುದ್ರ ತೀರದಲ್ಲಿ ದುರಂತಕ್ಕೀಡಾಗಿದೆ.




ಕೊಲಂಬೋದಿಂದ ಹಡಗು ಹೊರಟಿದ್ದಾಗ ಒಟ್ಟು 22 ಸಿಬಂದಿ ಇದ್ದರು. ಎಂಟು ಚೈನಾ, ನಾಲ್ಕು ತೈವಾನ್, ನಾಲ್ಕು ಮ್ಯಾನ್ಮಾರ್, ಇಬ್ಬರು ಇಂಡೋನೇಶ್ಯಾ ಮೂಲದವರು ಇದ್ದರು. ಈಗ 18 ಸಿಬಂದಿಯನ್ನು ರಕ್ಷಣೆ ಮಾಡಲಾಗಿದ್ದು ನಾಲ್ಕು ಮಂದಿ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಅವರ ರಕ್ಷಣೆಗಾಗಿ ಹುಡುಕಾಟ ಮುಂದುವರಿದಿದೆ. ಮಂಗಳೂರು ಕೋಸ್ಟ್ ಗಾರ್ಡ್ ಪಡೆಯ ಐಸಿಜಿಎಸ್ ರಾಜದೂತ್, ಕೊಚ್ಚಿಯ ಐಸಿಜಿಎಸ್ ಅರ್ನ್ವೇಶ್, ಅಗತ್ತಿಯ ಐಸಿಜಿಎಸ್ ಸಾಚೆಟ್ ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ನಾಪತ್ತೆಯಾದವರಲ್ಲಿ ಇಬ್ಬರು ತೈವಾನ್, ಒಬ್ಬ ಇಂಡೋನೇಶ್ಯಾ ಮತ್ತು ಇನ್ನೊಬ್ಬ ಮ್ಯಾನ್ಮಾರ್ ಮೂಲದವರು ಇದ್ದಾರೆ. ಹಡಗಿನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಎರಡನೇ ಹಡಗು ದುರಂತ
ಇತ್ತೀಚೆಗೆ ಮೇ 25ರಂದು ಕೇರಳ ಕರಾವಳಿಯಲ್ಲಿ ಲೈಬೀರಿಯಾ ಮೂಲದ 30 ವರ್ಷ ಹಳೆಯ ಬೃಹತ್ ಕಂಟೇನರ್ ಹಡಗು ಮುಳುಗಡೆಯಾಗಿತ್ತು. ಅದರಲ್ಲಿ 640 ಕಂಟೇನರ್ ಗಳಿದ್ದು, ಆ ಪೈಕಿ 12 ಕಂಟೇನರ್ ಗಳಲ್ಲಿ ಅತ್ಯಂತ ವಿಷಕಾರಿ ರಾಸಾಯನಿಕಗಳು ತುಂಬಿದ್ದವು. ಕೆಲವು ಕಂಟೇನರ್ ಗಳು ಕೇರಳ ಕರಾವಳಿ ದಡಕ್ಕೆ ತೇಲಿ ಬಂದಿದ್ದು ದಡಕ್ಕೆ ಬಡಿಯುತ್ತಲೇ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದ್ದವು. ಇದರಿಂದಾಗಿ ಕೇರಳದ ಕರಾವಳಿ ಸಮುದ್ರ ತೀರ ತೀವ್ರ ಮಲಿನಗೊಳ್ಳುವ ಆತಂಕ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಕಂಟೇನರ್ ಹಡಗು ದುರಂತಕ್ಕೀಡಾಗಿದೆ.
Fire Breaks Out on Singapore Container Ship Off Kerala Coast; 18 Crew Rescued, 4 Missing, Injured Brought to Mangalore by Coast Guard
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm