ಬ್ರೇಕಿಂಗ್ ನ್ಯೂಸ್
09-06-25 11:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 9 : ಕೇರಳದ ಕೊಚ್ಚಿಯ ಬೇಪೂರ್ ಸಮುದ್ರ ತೀರದಿಂದ 78 ನಾಟಿಕಲ್ ಮೈಲು ದೂರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದರಲ್ಲಿದ್ದ 18 ಮಂದಿಯನ್ನು ನೌಕಾಪಡೆ ಮತ್ತು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ನಾಲ್ವರು ಸಿಬಂದಿ ನಾಪತ್ತೆಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.
ಐವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ ಇದೆಯೆಂದು ಅಧಿಕಾರಿಗಳು ತಿಳಿಸಿದ್ದು, ಅವರನ್ನು ಐಎನ್ಎಸ್ ಸೂರತ್ ಶಿಪ್ ಮೂಲಕ ಪಣಂಬೂರು ಬಂದರಿಗೆ ತರಲಾಗಿದೆ. ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಯಿದೆ. ಎಂವಿ ವ್ಯಾನ್ ಹೈ 503 ಹೆಸರಿನ ಸಿಂಗಾಪುರದ ಕಂಟೇನರ್ ಹಡಗು ಶ್ರೀಲಂಕಾದ ಕೊಲಂಬೋದಿಂದ ಮುಂಬೈ ತೆರಳುತ್ತಿದ್ದಾಗ ಕೇರಳ ಸಮುದ್ರ ತೀರದಲ್ಲಿ ದುರಂತಕ್ಕೀಡಾಗಿದೆ.




ಕೊಲಂಬೋದಿಂದ ಹಡಗು ಹೊರಟಿದ್ದಾಗ ಒಟ್ಟು 22 ಸಿಬಂದಿ ಇದ್ದರು. ಎಂಟು ಚೈನಾ, ನಾಲ್ಕು ತೈವಾನ್, ನಾಲ್ಕು ಮ್ಯಾನ್ಮಾರ್, ಇಬ್ಬರು ಇಂಡೋನೇಶ್ಯಾ ಮೂಲದವರು ಇದ್ದರು. ಈಗ 18 ಸಿಬಂದಿಯನ್ನು ರಕ್ಷಣೆ ಮಾಡಲಾಗಿದ್ದು ನಾಲ್ಕು ಮಂದಿ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಅವರ ರಕ್ಷಣೆಗಾಗಿ ಹುಡುಕಾಟ ಮುಂದುವರಿದಿದೆ. ಮಂಗಳೂರು ಕೋಸ್ಟ್ ಗಾರ್ಡ್ ಪಡೆಯ ಐಸಿಜಿಎಸ್ ರಾಜದೂತ್, ಕೊಚ್ಚಿಯ ಐಸಿಜಿಎಸ್ ಅರ್ನ್ವೇಶ್, ಅಗತ್ತಿಯ ಐಸಿಜಿಎಸ್ ಸಾಚೆಟ್ ಹಡಗಿನ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ನಾಪತ್ತೆಯಾದವರಲ್ಲಿ ಇಬ್ಬರು ತೈವಾನ್, ಒಬ್ಬ ಇಂಡೋನೇಶ್ಯಾ ಮತ್ತು ಇನ್ನೊಬ್ಬ ಮ್ಯಾನ್ಮಾರ್ ಮೂಲದವರು ಇದ್ದಾರೆ. ಹಡಗಿನಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಎರಡನೇ ಹಡಗು ದುರಂತ
ಇತ್ತೀಚೆಗೆ ಮೇ 25ರಂದು ಕೇರಳ ಕರಾವಳಿಯಲ್ಲಿ ಲೈಬೀರಿಯಾ ಮೂಲದ 30 ವರ್ಷ ಹಳೆಯ ಬೃಹತ್ ಕಂಟೇನರ್ ಹಡಗು ಮುಳುಗಡೆಯಾಗಿತ್ತು. ಅದರಲ್ಲಿ 640 ಕಂಟೇನರ್ ಗಳಿದ್ದು, ಆ ಪೈಕಿ 12 ಕಂಟೇನರ್ ಗಳಲ್ಲಿ ಅತ್ಯಂತ ವಿಷಕಾರಿ ರಾಸಾಯನಿಕಗಳು ತುಂಬಿದ್ದವು. ಕೆಲವು ಕಂಟೇನರ್ ಗಳು ಕೇರಳ ಕರಾವಳಿ ದಡಕ್ಕೆ ತೇಲಿ ಬಂದಿದ್ದು ದಡಕ್ಕೆ ಬಡಿಯುತ್ತಲೇ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದ್ದವು. ಇದರಿಂದಾಗಿ ಕೇರಳದ ಕರಾವಳಿ ಸಮುದ್ರ ತೀರ ತೀವ್ರ ಮಲಿನಗೊಳ್ಳುವ ಆತಂಕ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಕಂಟೇನರ್ ಹಡಗು ದುರಂತಕ್ಕೀಡಾಗಿದೆ.
Fire Breaks Out on Singapore Container Ship Off Kerala Coast; 18 Crew Rescued, 4 Missing, Injured Brought to Mangalore by Coast Guard
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm