ಬ್ರೇಕಿಂಗ್ ನ್ಯೂಸ್
10-06-25 07:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ಪೊಲೀಸರ ವಿರುದ್ಧ ಆಂದೋಲನ ಮಾಡ್ತೀವಿ, ಬೀದಿಗೆ ಇಳಿಯುತ್ತೇವೆ, ಹಿಂದುಗಳನ್ನು ಮುಟ್ಟಿದರೆ ಜಾಗ್ರತೆ, ಗೂಂಡಾವರ್ತನೆ ಎಂದೆಲ್ಲಾ ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕರು ಜಿಲ್ಲೆಯ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಯತ್ನ ಮಾಡಿದ್ದಾರೆ. ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡ್ತಾರೆ, ಅದು ಬಿಟ್ಟು ನಿಮಗೆ ಬೇಕಾದಂತೆ ಕೆಲಸ ಮಾಡೋಕ್ಕಿರುವುದಲ್ಲ. ಯಾರ ಮೇಲೆ ಸುಳ್ಳು ಕೇಸು ಹಾಕಿದ್ದಾರೆ ಅಂತ ಆಧಾರ ಸಹಿತ ಹೇಳಲಿ. ಏನು ಬೇಕಾದ್ರೂ ಮಾತಾಡಿ ಹೋಗ್ತೀವಿ ಅಂದ್ರೆ ನಾವು ಒಪ್ಪುವುದಿಲ್ಲ. ಇದರ ಬಗ್ಗೆ ಕ್ರಮ ಆಗಬೇಕೆಂದು ಗೃಹ ಇಲಾಖೆಯನ್ನು ಆಗ್ರಹಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಗೃಹ ಸಚಿವರಾಗಿ ಕೆಲಸ ಮಾಡಿದವರು ಈ ರೀತಿ ಕ್ಷುಲ್ಲಕವಾಗಿ ಮಾತನಾಡಬಾರದು, ಪೊಲೀಸರು ಯಾರ ಮನೆಗೂ ಹೋಗಬಾರದು ಅಂತೀರಿ.. ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡುತ್ತಾರೆ, ಕಾನೂನು ಮೀರಿ ಮಾಡಿದ್ರೆ ನ್ಯಾಯಾಲಯ ಇದೆ, ಪ್ರಶ್ನೆ ಮಾಡಬಹುದು. ಅದು ಬಿಟ್ಟು ಪೊಲೀಸರಿಗೆ ಧಮ್ಕಿ ಹಾಕುವುದು ಸರಿಯಲ್ಲ.
ಕರಾವಳಿಯಲ್ಲಿ ಸುದೀರ್ಘ ಕಾಲ ಆಡಳಿತ ಮಾಡಿದ್ದು ಕಾಂಗ್ರೆಸ್. ಇಲ್ಲಿ ಶಾಂತಿ ಸ್ಥಾಪನೆಗಾಗಿ ಕೋಮು ನಿಗ್ರಹ ದಳ ಮಾಡಿದ್ರೆ ಅದನ್ನು ಪ್ರಶ್ನೆ ಮಾಡುತ್ತೀರಿ, ಅದನ್ನು ಮಾಡಿಲ್ಲಾಂದ್ರೆ ಅದ್ಯಾಕೆ ಮಾಡಿಲ್ಲ ಅಂತ ಕೇಳುತ್ತೀರಿ. ಬಿಜೆಪಿಗೆ ಸದಾ ಕರಾವಳಿಯಲ್ಲಿ ಗೊಂದಲ ಇರಬೇಕು, ಸೌಹಾರ್ದ ಇರಬಾರದು, ಇದರ ನಡುವೆ ಬೇಳೆ ಬೇಯಿಸುವ ಕೆಲಸ ಆಗುತ್ತಿರಬೇಕು. ನಾವಿದಕ್ಕೆ ಅವಕಾಶ ಕೊಡಲ್ಲ ಎಂದರು.
ಮಂಗಳೂರಿನ ಸಂಸದರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಯಾಕೆ ಎನ್ಐಎಗೆ ಕೊಡಿಸಿದ್ದಾರೆ. ಜಿಲ್ಲೆಯ ಬಗ್ಗೆ ಕಾಳಜಿ ಇರುತ್ತಿದ್ದರೆ ಅಶ್ರಫ್, ಅಬ್ದುಲ್ ರಹಿಮಾನ್ ಕೇಸನ್ನೂ ಕೊಡಿಸಬೇಕಿತ್ತು. ಈ ಕುರಿತ ಆದೇಶದಲ್ಲಿ ಆರೋಪಿಗಳಿಗೆ ಪಿಎಫ್ಐ ಸಂಪರ್ಕದ ಅನುಮಾನ ಇದೆಯೆಂದು ಹೇಳಿದೆ. ಕೇವಲ ಅನುಮಾನದ ಮೇಲೆ ತನಿಖೆಗೆ ಆದೇಶ ನೀಡುವುದಕ್ಕಾಗುತ್ತಾ.. ಯಾವ ಮಾನದಂಡದ ಮೇಲೆ ಅಂತ ಬೇಕಲ್ವಾ.. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದಕ್ಕೆ ಸುಣ್ಣ ಅಂತ ಯಾಕೆ ಮಾಡುತ್ತೀರಿ. ಪ್ರವೀಣ್ ನೆಟ್ಟಾರು ಕೊಲೆ ಬಳಿಕದ ಎಲ್ಲ ಕೋಮು ಆಧಾರಿತ ಹತ್ಯೆಗಳ ಬಗ್ಗೆಯೂ ಎನ್ಐಎ ತನಿಖೆ ಮಾಡಲಿ. ಸತ್ಯ ಏನೆಂದು ಹೊರಬರುತ್ತದೆ ಎಂದು ಹೇಳಿದರು.
ಎನ್ಐಎ ತನಿಖೆ ಕೊಡುವಾಗ ರಾಜ್ಯ ಸರಕಾರದ ಅನುಮತಿ ಪಡೆಯಬೇಕಿತ್ತು. ಅದನ್ನು ಮಾಡಿಲ್ಲ. ಇದಲ್ಲದೆ, ಈ ಎನ್ಐಎ ತನಿಖೆಯ ಅಗತ್ಯ ಮತ್ತು ಔಚಿತ್ಯದ ಬಗ್ಗೆ ಚರ್ಚೆಯಾಗಬೇಕಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದು ಐವಾನ್ ಡಿಸೋಜ ಹೇಳಿದರು.
Congress MLC Ivan D’Souza launched a sharp attack against BJP leaders on Monday, accusing them of attempting to demoralize the police force in Dakshina Kannada through provocative statements and threats.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm