ಬ್ರೇಕಿಂಗ್ ನ್ಯೂಸ್
12-06-25 02:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 12 : ಕರಾವಳಿ ಜಿಲ್ಲೆಗಳಲ್ಲಿ ಪದೇ ಪದೇ ಕೋಮು ಸಂಘರ್ಷ, ಕೋಮು ಆಧಾರಿತ ಹತ್ಯೆಗಳಾಗುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ನೂತನ ಕಾರ್ಯಪಡೆ ಒಂದನ್ನು ರಚಿಸಿದ್ದು, ಜೂನ್ 13ರಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡ ಈ ಕಾರ್ಯಪಡೆಯ ಕೇಂದ್ರ ಕಚೇರಿ ಮಂಗಳೂರಿನಲ್ಲಿ ಇರಲಿದೆ.
ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್ಎಎಫ್) ಎಂದು ಈ ವಿಶೇಷ ಕಾರ್ಯಪಡೆಗೆ ಹೆಸರಿಡಲಾಗಿದ್ದು, ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಯಲ್ಲಿದ್ದ ಸಿಬಂದಿಯನ್ನೇ ಹೊಸ ಕಾರ್ಯಪಡೆಗೆ ನಿಯೋಜನೆ ಮಾಡಲಾಗಿದೆ. ಡಿಐಜಿ ದರ್ಜೆಯ ಅಧಿಕಾರಿಯೊಬ್ಬರು ಇದರ ಮುಖ್ಯಸ್ಥರಾಗಿರಲಿದ್ದು, ಸದ್ಯಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರೇ ಹೆಚ್ಚುವರಿಯಾಗಿ ನೇತೃತ್ವ ವಹಿಸಲಿದ್ದಾರೆಂಬ ಮಾಹಿತಿ ಇದೆ. ಎಎನ್ಎಫ್ ಪಡೆಯಿಂದ ಎರವಲು ಪಡೆದ 248 ಸಿಬಂದಿಯನ್ನು ಹೊಸ ಕಾರ್ಯಪಡೆಗೆ ನಿಯೋಜನೆ ಮಾಡಲಾಗಿದ್ದು, ಇವನ್ನು ಮೂರು ತುಕಡಿಗಳಾಗಿ ವಿಭಜಿಸಲಾಗಿದೆ. ಪ್ರತಿ ತುಕಡಿಯಲ್ಲಿ ತಲಾ 80 ಸಿಬಂದಿ ಇರಲಿದ್ದಾರೆ.





ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಈ ಕಾರ್ಯಪಡೆಯು ವಿಶೇಷ ನಿಗಾ ವಹಿಸಲಿದ್ದು, ಯಾವುದೇ ಅಹಿತಕರ ಘಟನೆಗಳಾದರೂ ಈ ಪಡೆಯ ಸದಸ್ಯರು ತುರ್ತಾಗಿ ಹಾಜರಾಗಲಿದ್ದಾರೆ. ಕೋಮು ಸೂಕ್ಷ್ಮ ಪ್ರದೇಶದಲ್ಲಿ ತಮ್ಮದೇ ಆದ ಗುಪ್ತಚರ ದಳವನ್ನೂ ಈ ಕಾರ್ಯಪಡೆ ಹೊಂದಿರುತ್ತದೆ. ಆಮೂಲಕ ಸಂಭಾವ್ಯ ಕೋಮು ಹಿಂಸಾಚಾರ, ಗಲಭೆಯಂತಹ ಸಂಚುಗಳನ್ನು ವಿಫಲಗೊಳಿಸಲು ಕಾರ್ಯಪಡೆಯನ್ನು ಸಜ್ಜುಗೊಳಿಸಲಾಗಿದೆ. ಕೋಮು ದ್ವೇಷದ ವಿಚಾರದ ಮೇಲೆ ನಿಗಾ ವಹಿಸುವುದು, ಮೂಲಭೂತವಾದಿ ಚಟುವಟಿಕೆ ಬಗ್ಗೆ ನಿಗಾ ಇಡುವುದು, ಜಾಲತಾಣಗಳ ಮೇಲೆ ಸೂಕ್ಷ್ಮ ನಿಗಾ ಇಡುವ ಕೆಲಸವನ್ನೂ ಇದರಲ್ಲಿರುವ ಗುಪ್ತಚರರು ಮಾಡಲಿದ್ದಾರೆ.
ಡಿಐಜಿ ದರ್ಜೆಯ ಮುಖ್ಯಸ್ಥರ ಕೈಕೆಳಗೆ ಡಿವೈಎಸ್ಪಿ ಇರುತ್ತಾರೆ. ಸದ್ಯಕ್ಕೆ ಮಂಗಳೂರಿನಲ್ಲಿ ಈ ಹಿಂದೆ ಸುದೀರ್ಘ ಕಾಲ ಕೆಲಸ ಮಾಡಿ ಅನುಭವ ಹೊಂದಿರುವ ಕೆ.ಯು ಬೆಳ್ಳಿಯಪ್ಪ ಅವರನ್ನು ಕಾರ್ಯಪಡೆಯ ಡಿವೈಎಸ್ಪಿ ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಅವರ ಕೈಕೆಳಗೆ ನಾಲ್ವರು ಇನ್ಸ್ ಪೆಕ್ಟರ್, 16 ಪಿಎಸ್ಐಗಳು ಇರುತ್ತಾರೆ. ಒಟ್ಟು 248 ಸಿಬಂದಿಯನ್ನು ಒಳಗೊಂಡ ಕಾರ್ಯಪಡೆ ಇದಾಗಿದ್ದು, ಮಂಗಳೂರು ಪೊಲೀಸ್ ಮೈದಾನದಲ್ಲಿ ಈ ಪಡೆಯ ಕವಾಯತು ಮಾಡಲಾಗಿದೆ. ನಕ್ಸಲ್ ನಿಗ್ರಹ ಪಡೆಯಲ್ಲಿದ್ದ ಇನ್ಸ್ ಪೆಕ್ಟರ್ ಸಹಿತ 248 ಸಿಬಂದಿಯನ್ನು ಸ್ಪೆಷಲ್ ಏಕ್ಷನ್ ಫೋರ್ಸ್ ಆಗಿ ಹೊಸತಾಗಿ ಕಾರ್ಯಪಡೆ ರಚಿಸಲಾಗಿದೆ. ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ಠಾಣೆ ವ್ಯಾಪ್ತಿಯಲ್ಲಿ ಕೋಮು ಆಧಾರಿತ ಗಲಾಟೆ, ಇನ್ನಿತರ ಬೆಳವಣಿಗೆಯಾದರೆ ಈ ಕಾರ್ಯಪಡೆಯು ಎಂಟ್ರಿ ಆಗಲಿದೆ.
In response to escalating communal tensions and incidents in coastal Karnataka, the state government has announced the formation of a Special Action Force (SAF) aimed at curbing communal violence and maintaining peace across Dakshina Kannada, Udupi, and Shivamogga districts. The SAF will be headquartered in Mangaluru and is set to commence operations on June 13, 2025.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm