ಬ್ರೇಕಿಂಗ್ ನ್ಯೂಸ್
12-06-25 02:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 12 : ಕರಾವಳಿ ಜಿಲ್ಲೆಗಳಲ್ಲಿ ಪದೇ ಪದೇ ಕೋಮು ಸಂಘರ್ಷ, ಕೋಮು ಆಧಾರಿತ ಹತ್ಯೆಗಳಾಗುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ನೂತನ ಕಾರ್ಯಪಡೆ ಒಂದನ್ನು ರಚಿಸಿದ್ದು, ಜೂನ್ 13ರಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡ ಈ ಕಾರ್ಯಪಡೆಯ ಕೇಂದ್ರ ಕಚೇರಿ ಮಂಗಳೂರಿನಲ್ಲಿ ಇರಲಿದೆ.
ಸ್ಪೆಷಲ್ ಆಕ್ಷನ್ ಫೋರ್ಸ್ (ಎಸ್ಎಎಫ್) ಎಂದು ಈ ವಿಶೇಷ ಕಾರ್ಯಪಡೆಗೆ ಹೆಸರಿಡಲಾಗಿದ್ದು, ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಯಲ್ಲಿದ್ದ ಸಿಬಂದಿಯನ್ನೇ ಹೊಸ ಕಾರ್ಯಪಡೆಗೆ ನಿಯೋಜನೆ ಮಾಡಲಾಗಿದೆ. ಡಿಐಜಿ ದರ್ಜೆಯ ಅಧಿಕಾರಿಯೊಬ್ಬರು ಇದರ ಮುಖ್ಯಸ್ಥರಾಗಿರಲಿದ್ದು, ಸದ್ಯಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರೇ ಹೆಚ್ಚುವರಿಯಾಗಿ ನೇತೃತ್ವ ವಹಿಸಲಿದ್ದಾರೆಂಬ ಮಾಹಿತಿ ಇದೆ. ಎಎನ್ಎಫ್ ಪಡೆಯಿಂದ ಎರವಲು ಪಡೆದ 248 ಸಿಬಂದಿಯನ್ನು ಹೊಸ ಕಾರ್ಯಪಡೆಗೆ ನಿಯೋಜನೆ ಮಾಡಲಾಗಿದ್ದು, ಇವನ್ನು ಮೂರು ತುಕಡಿಗಳಾಗಿ ವಿಭಜಿಸಲಾಗಿದೆ. ಪ್ರತಿ ತುಕಡಿಯಲ್ಲಿ ತಲಾ 80 ಸಿಬಂದಿ ಇರಲಿದ್ದಾರೆ.





ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಈ ಕಾರ್ಯಪಡೆಯು ವಿಶೇಷ ನಿಗಾ ವಹಿಸಲಿದ್ದು, ಯಾವುದೇ ಅಹಿತಕರ ಘಟನೆಗಳಾದರೂ ಈ ಪಡೆಯ ಸದಸ್ಯರು ತುರ್ತಾಗಿ ಹಾಜರಾಗಲಿದ್ದಾರೆ. ಕೋಮು ಸೂಕ್ಷ್ಮ ಪ್ರದೇಶದಲ್ಲಿ ತಮ್ಮದೇ ಆದ ಗುಪ್ತಚರ ದಳವನ್ನೂ ಈ ಕಾರ್ಯಪಡೆ ಹೊಂದಿರುತ್ತದೆ. ಆಮೂಲಕ ಸಂಭಾವ್ಯ ಕೋಮು ಹಿಂಸಾಚಾರ, ಗಲಭೆಯಂತಹ ಸಂಚುಗಳನ್ನು ವಿಫಲಗೊಳಿಸಲು ಕಾರ್ಯಪಡೆಯನ್ನು ಸಜ್ಜುಗೊಳಿಸಲಾಗಿದೆ. ಕೋಮು ದ್ವೇಷದ ವಿಚಾರದ ಮೇಲೆ ನಿಗಾ ವಹಿಸುವುದು, ಮೂಲಭೂತವಾದಿ ಚಟುವಟಿಕೆ ಬಗ್ಗೆ ನಿಗಾ ಇಡುವುದು, ಜಾಲತಾಣಗಳ ಮೇಲೆ ಸೂಕ್ಷ್ಮ ನಿಗಾ ಇಡುವ ಕೆಲಸವನ್ನೂ ಇದರಲ್ಲಿರುವ ಗುಪ್ತಚರರು ಮಾಡಲಿದ್ದಾರೆ.
ಡಿಐಜಿ ದರ್ಜೆಯ ಮುಖ್ಯಸ್ಥರ ಕೈಕೆಳಗೆ ಡಿವೈಎಸ್ಪಿ ಇರುತ್ತಾರೆ. ಸದ್ಯಕ್ಕೆ ಮಂಗಳೂರಿನಲ್ಲಿ ಈ ಹಿಂದೆ ಸುದೀರ್ಘ ಕಾಲ ಕೆಲಸ ಮಾಡಿ ಅನುಭವ ಹೊಂದಿರುವ ಕೆ.ಯು ಬೆಳ್ಳಿಯಪ್ಪ ಅವರನ್ನು ಕಾರ್ಯಪಡೆಯ ಡಿವೈಎಸ್ಪಿ ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಅವರ ಕೈಕೆಳಗೆ ನಾಲ್ವರು ಇನ್ಸ್ ಪೆಕ್ಟರ್, 16 ಪಿಎಸ್ಐಗಳು ಇರುತ್ತಾರೆ. ಒಟ್ಟು 248 ಸಿಬಂದಿಯನ್ನು ಒಳಗೊಂಡ ಕಾರ್ಯಪಡೆ ಇದಾಗಿದ್ದು, ಮಂಗಳೂರು ಪೊಲೀಸ್ ಮೈದಾನದಲ್ಲಿ ಈ ಪಡೆಯ ಕವಾಯತು ಮಾಡಲಾಗಿದೆ. ನಕ್ಸಲ್ ನಿಗ್ರಹ ಪಡೆಯಲ್ಲಿದ್ದ ಇನ್ಸ್ ಪೆಕ್ಟರ್ ಸಹಿತ 248 ಸಿಬಂದಿಯನ್ನು ಸ್ಪೆಷಲ್ ಏಕ್ಷನ್ ಫೋರ್ಸ್ ಆಗಿ ಹೊಸತಾಗಿ ಕಾರ್ಯಪಡೆ ರಚಿಸಲಾಗಿದೆ. ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ಠಾಣೆ ವ್ಯಾಪ್ತಿಯಲ್ಲಿ ಕೋಮು ಆಧಾರಿತ ಗಲಾಟೆ, ಇನ್ನಿತರ ಬೆಳವಣಿಗೆಯಾದರೆ ಈ ಕಾರ್ಯಪಡೆಯು ಎಂಟ್ರಿ ಆಗಲಿದೆ.
In response to escalating communal tensions and incidents in coastal Karnataka, the state government has announced the formation of a Special Action Force (SAF) aimed at curbing communal violence and maintaining peace across Dakshina Kannada, Udupi, and Shivamogga districts. The SAF will be headquartered in Mangaluru and is set to commence operations on June 13, 2025.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm