ಬ್ರೇಕಿಂಗ್ ನ್ಯೂಸ್
12-06-25 10:26 pm Mangalore Correspondent ಕರಾವಳಿ
ಮಂಗಳೂರು, ಜೂನ್ 12 : ಅಹ್ಮದಾಬಾದ್ ಏರ್ಪೋರ್ಟ್ ಬಳಿಯಲ್ಲೇ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಕೋ ಪೈಲಟ್ ಆಗಿದ್ದ ಕ್ಲೈವ್ ಕುಂದರ್ ಮಂಗಳೂರು ಮೂಲದವರು ಎನ್ನುವ ಮಾಹಿತಿ ಇದೆ. ಆದರೆ ಈ ಬಗ್ಗೆ ಮಂಗಳೂರಿನಲ್ಲಿ ಸರ್ಚ್ ಮಾಡಿದಾಗ, ಕ್ಲೈವ್ ಕುಂದರ್ ಹೆತ್ತವರು, ಕುಟುಂಬಸ್ಥರು ಮುಂಬೈನಲ್ಲಿಯೇ ನೆಲೆಸಿದ್ದಾರೆ ಎಂಬುದು ಖಚಿತವಾಗಿದೆ.
ಮಂಗಳೂರು ಮೂಲದ ಕ್ಲಿಫರ್ಡ್ ಕುಂದರ್ ಮುಂಬೈನ ಕಾಲಿನಾದಲ್ಲಿ ನಿವಾಸಿಯಾಗಿದ್ದು, ಇವರ ಪುತ್ರ ಕ್ಲೈವ್ ಕುಂದರ್ ಏರ್ ಇಂಡಿಯಾ ವಿಮಾನದಲ್ಲಿ ಕೋ ಪೈಲಟ್ ಆಗಿದ್ದರು. ಕುಂದರ್ ಎನ್ನುವ ಸರ್ನೇಮ್ ಇರುವುದರಿಂದ ಇವರು ಮಂಗಳೂರು ಮೂಲದ ಸಿಎಸ್ಐ ಪ್ರೊಟೆಸ್ಟಂಟ್ ಕ್ರೈಸ್ತರು. ಮಂಗಳೂರಿನಲ್ಲಿ ಜಪ್ಪಿನಮೊಗರು, ಬಲ್ಮಠ, ಕಿನ್ನಿಗೋಳಿ ಆಸುಪಾಸಿನಲ್ಲಿ ಇವರು ಹೆಚ್ಚಾಗಿ ನೆಲೆಸಿದ್ದಾರೆ. ಕ್ಲೈವ್ ಕುಂದರ್ ಬಗ್ಗೆ ಜೆಪ್ಪುವಿನ ಕಾಂತಿ ಚರ್ಚ್ ಫಾದರ್ ಗೇಬ್ರಿಯಲ್ ಸ್ಯಾಮುವೆಲ್ ಅವರಲ್ಲಿ ಕೇಳಿದಾಗ, ಹೆಚ್ಚಿನವರು ನಮ್ಮ ಕಾಂತಿ ಚರ್ಚ್ ನವರು ಎಂದು ಫೋನ್ ಮಾಡುತ್ತಿದ್ದಾರೆ. ಆದರೆ ಕ್ಲೈವ್ ಕುಂದರ್ ಕುಟುಂಬ ಇಲ್ಲಿ ನೆಲೆಸಿಲ್ಲ. ಅವರ ಫ್ಯಾಮಿಲಿ ಮುಂಬೈನ ಕುರ್ಲಾದಲ್ಲಿದ್ದಾರೆ. ಕುರ್ಲಾದಲ್ಲಿ ಯುಬಿಎಮ್ ಕಾಂತಿ ಚರ್ಚ್ ಸದಸ್ಯರು ಎಂದು ಹೇಳಿದ್ದಾರೆ.

ಬಲ್ಮಠ ಥಿಯೋಲಾಜಿಕಲ್ ಸೊಸೈಟಿಯವರು ಹೇಳುವ ಪ್ರಕಾರ, ಮಂಗಳೂರು ಮೂಲ ಆಗಿದ್ದರೂ ಬಹಳಷ್ಟು ಸಿಎಸ್ಐ ಕುಟುಂಬಗಳು ಮುಂಬೈನಲ್ಲಿ ನೆಲೆಸಿದ್ದು ಅಲ್ಲಿಯೇ ಸೆಟ್ಲ್ ಆಗಿದ್ದಾರೆ. ಕ್ಲೈವ್ ಕುಂದರ್ ಅವರ ಹೆತ್ತವರು ಕೂಡ ಮುಂಬೈನಲ್ಲಿಯೇ ಇದ್ದಾರೆ. ಕ್ಲೈವ್ ಕುಂದರ್ ಅಮೆರಿಕದ ಫ್ಲೋರಿಡಾದಲ್ಲಿ ಪೈಲಟ್ ತರಬೇತಿ ಪಡೆದಿದ್ದು, ಆನಂತರ ಕೋ ಪೈಲಟ್ ಆಗಿ ಏರ್ ಇಂಡಿಯಾದಲ್ಲಿ ಕೆಲಸಕ್ಕೆ ಸೇರಿದ್ದರು. ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿದ್ದ ಮುಖ್ಯ ಪೈಲಟ್ ಕಮಾಂಡರ್ ಸುಮಿತ್ ಸಬರ್ವಾಲ್ 8200 ಗಂಟೆಗಳ ಪ್ರಯಾಣದ ಅನುಭವ ಹೊಂದಿದ್ದು, ಇತರರಿಗೆ ತರಬೇತಿಯನ್ನೂ ನೀಡುತ್ತಿದ್ದರು. ಕ್ಲೈವ್ ಕುಂದರ್ ಅವರಿಂದಲೂ ತರಬೇತಿ ಪಡೆಯುತ್ತಿದ್ದರು. ಆದರೂ 1100 ಗಂಟೆಗಳ ಪ್ರಯಾಣದ ಅನುಭವ ಹೊಂದಿದ್ದರು.
Following the tragic crash of the Air India flight near Ahmedabad, it was initially believed that co-pilot Clive Kundar hailed from Mangaluru. However, fresh clarification from local church authorities confirms that his family resides in Mumbai and not in Mangaluru.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm