ಬ್ರೇಕಿಂಗ್ ನ್ಯೂಸ್
13-06-25 09:38 am Mangalore Correspondent ಕರಾವಳಿ
ಉಳ್ಳಾಲ, ಜೂ.13 : ಅಪಾರ್ಟ್ಮೆಂಟ್ ಕಟ್ಟಡದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಸಂಭವಿಸಿದೆ.
ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹಮ್ಮದ್ ಮತ್ತು ಖಮರ್ಜಹಾ ಬಾನು ಇವರ ಹಿರಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿರುವ ಬಾಲಕಿ. 18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು. ನಿನ್ನೆ ರಾತ್ರಿ ದಂಪತಿ ಇಬ್ಬರೂ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು.

ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರು. ಹಿಬಾ ರಾತ್ರಿ ಬಾಲ್ಕನಿಯಲ್ಲಿ ಬಟ್ಟೆ ಹಾಕಲೆಂದು ಕುರ್ಚಿಯಲ್ಲಿ ನಿಂತಾಗ ಆಯತಪ್ಪಿ ವಸತಿ ಸಂಕೀರ್ಣದ ಕಟ್ಟಡದಿಂದ ಕೆಳಗಡೆ ಬಿದ್ದು ಸಾವನ್ನಪ್ಪಿದ್ದಾಳೆಂದು ಉಳ್ಳಾಲ ಪೊಲೀಸರು ತಿಳಿಸಿದ್ದಾರೆ. ಮೃತ ಹಿಬಾ ಮಂಗಳೂರಿನ ಯೆನೆಪೋಯ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾರ್ಥಿನಿ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a tragic incident, a 15-year-old SSLC student lost her life after accidentally falling from the 12th floor of a high-rise residential complex in Kuthar, Mangalore. The victim, Hiba Aiman, daughter of Dr. Mumtaz Ahmad and Khamarjaha Banu—both doctors at Yenepoya Hospital in Deralakatte—was a resident of the Siliconia Apartments, an 18-storey building in Kuthar. The incident occurred on Wednesday night while she was reportedly hanging clothes on the balcony.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm