ಬ್ರೇಕಿಂಗ್ ನ್ಯೂಸ್
14-06-25 12:11 pm Mangaluru Correspondent ಕರಾವಳಿ
ಮಂಗಳೂರು, ಜೂನ್ 14: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.
ಬೆಂಗಳೂರು ಎನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬಂದಿಯುಳ್ಳ ಅಧಿಕಾರಿಗಳ ತಂಡ ಮಂಗಳೂರಿಗೆ ಬಂದಿದೆ. ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿತ್ತು. ಹಿಂದು ಸಂಘಟನೆ ನಾಯಕರು ಸುಹಾಸ್ ಶೆಟ್ಟಿ ಹತ್ಯೆಯನ್ನು ಎನ್ಐಎ ತನಿಖೆಗೆ ಒತ್ತಾಯ ಮಾಡಿದ್ದರಿಂದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದು ಗಮನ ಸೆಳೆದಿದ್ದರು.
ನಿನ್ನೆಯಷ್ಟೆ ಮಂಗಳೂರು ಬಂದಿದ್ದ ರಾಜ್ಯದ ಗೃಹ ಸಚಿವ ಪರಮೇಶ್ವರ್, ಎನ್ಐಎ ತನಿಖೆಗೆ ಕೊಟ್ಟಿದ್ದಾರೆ, ಅವರಿಗೆ ಪವರ್ ಇದೆ, ತನಿಖೆ ಮಾಡುತ್ತಾರೆ, ನಾವು ಹಸ್ತಕ್ಷೇಪ ಮಾಡುವುದಿಲ್ಲ. ಒಂದು ಪ್ರಕರಣ ಮಾತ್ರ ಯಾಕೆ ಎನ್ಐಎ ಕೊಟ್ಟಿದ್ದಾರೆಂದು ಗೊತ್ತಿಲ್ಲ ಎಂದಿದ್ದರು. ಸುಹಾಸ್ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಎನ್ಐಎ ತನಿಖೆ ಸಲುವಾಗಿ ಮಂಗಳೂರು ಪೊಲೀಸರು ಸುಹಾಸ್ ಹತ್ಯೆ ಪ್ರಕರಣದ ಎಲ್ಲ ಕಡತಗಳನ್ನು ಅವರಿಗೆ ಹಸ್ತಾಂತರ ಮಾಡಬೇಕಾಗುತ್ತದೆ.
In a major development in the Suhas Shetty murder case, a team of officials from the National Investigation Agency (NIA) has arrived in Mangaluru to collect crucial information related to the incident. The NIA's involvement suggests the case may have broader implications beyond local crime, possibly hinting at larger networks or organized elements.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm