ಬ್ರೇಕಿಂಗ್ ನ್ಯೂಸ್
14-06-25 12:11 pm Mangaluru Correspondent ಕರಾವಳಿ
ಮಂಗಳೂರು, ಜೂನ್ 14: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.
ಬೆಂಗಳೂರು ಎನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬಂದಿಯುಳ್ಳ ಅಧಿಕಾರಿಗಳ ತಂಡ ಮಂಗಳೂರಿಗೆ ಬಂದಿದೆ. ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿತ್ತು. ಹಿಂದು ಸಂಘಟನೆ ನಾಯಕರು ಸುಹಾಸ್ ಶೆಟ್ಟಿ ಹತ್ಯೆಯನ್ನು ಎನ್ಐಎ ತನಿಖೆಗೆ ಒತ್ತಾಯ ಮಾಡಿದ್ದರಿಂದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದು ಗಮನ ಸೆಳೆದಿದ್ದರು.
ನಿನ್ನೆಯಷ್ಟೆ ಮಂಗಳೂರು ಬಂದಿದ್ದ ರಾಜ್ಯದ ಗೃಹ ಸಚಿವ ಪರಮೇಶ್ವರ್, ಎನ್ಐಎ ತನಿಖೆಗೆ ಕೊಟ್ಟಿದ್ದಾರೆ, ಅವರಿಗೆ ಪವರ್ ಇದೆ, ತನಿಖೆ ಮಾಡುತ್ತಾರೆ, ನಾವು ಹಸ್ತಕ್ಷೇಪ ಮಾಡುವುದಿಲ್ಲ. ಒಂದು ಪ್ರಕರಣ ಮಾತ್ರ ಯಾಕೆ ಎನ್ಐಎ ಕೊಟ್ಟಿದ್ದಾರೆಂದು ಗೊತ್ತಿಲ್ಲ ಎಂದಿದ್ದರು. ಸುಹಾಸ್ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಎನ್ಐಎ ತನಿಖೆ ಸಲುವಾಗಿ ಮಂಗಳೂರು ಪೊಲೀಸರು ಸುಹಾಸ್ ಹತ್ಯೆ ಪ್ರಕರಣದ ಎಲ್ಲ ಕಡತಗಳನ್ನು ಅವರಿಗೆ ಹಸ್ತಾಂತರ ಮಾಡಬೇಕಾಗುತ್ತದೆ.
In a major development in the Suhas Shetty murder case, a team of officials from the National Investigation Agency (NIA) has arrived in Mangaluru to collect crucial information related to the incident. The NIA's involvement suggests the case may have broader implications beyond local crime, possibly hinting at larger networks or organized elements.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 07:37 pm
Mangalore Correspondent
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm