ಬ್ರೇಕಿಂಗ್ ನ್ಯೂಸ್
14-06-25 02:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 14 : ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ಕಡೆಯಿಂದ ವಿವಿಧ ಮಾದರಿಯ ತನಿಖೆ ನಡೆಸುವ ಬದಲು ನಿವೃತ್ತ ನ್ಯಾಯಾಧೀಶರಿಂದ ಒಂದೇ ರೀತಿಯ ತನಿಖೆ ನಡೆಸಬೇಕು. ಆ ಬಗ್ಗೆ ಶೀಘ್ರದಲ್ಲೇ ವರದಿ ತರಿಸಿಕೊಂಡು ಸಾರ್ವಜನಿಕರು ಮತ್ತು ಕ್ರಿಕೆಟ್ ಪ್ರೇಮಿಗಳಲ್ಲಿ ವಿಶ್ವಾಸ ಮೂಡಿಸಲು ಸರಕಾರ ಕ್ರಮ ವಹಿಸಬೇಕು ಎಂದು ವೀರಪ್ಪ ಮೊಯ್ಲಿ ಸಲಹೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ಪುಟಗಳ ಪತ್ರ ಬರೆದಿರುವ ವೀರಪ್ಪ ಮೊಯ್ಲಿ, ಕಾಲ್ತುಳಿತ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂರು ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಪ್ರಕಟಿಸಿರುವುದು ಸರಿಯಲ್ಲ. ಇದರಿಂದ ಸರಕಾರದ ಆಡಳಿತಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆಗಳಿವೆ. ಹೀಗಾಗಿ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಕಾಲ್ತುಳಿತದ ಆಕಸ್ಮಿಕ ಘಟನೆಯಿಂದಾಗಿ ಅನೇಕ ದಶಕಗಳಿಂದ ಗಳಿಸಿದ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಅಳಿಸಿ ಹಾಕಬಾರದು. ಈ ಬಗ್ಗೆ ವಿಶೇಷ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುವ ಅನಿವಾರ್ಯತೆಯಿದೆ. ದುರ್ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆಯ ಮೇಲೆ ಕೆಟ್ಟ ಹೆಸರು ಬಂದಿದೆ. ಆ ಕೆಟ್ಟ ಹೆಸರನ್ನು ಅಳಿಸಿ ಹಾಕಬೇಕು ಎಂದು ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ.
ಆರ್ಸಿಬಿ ವಿಜಯೋತ್ಸವವನ್ನು ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ನಡೆದಿದೆ, ಇದು ಸಲ್ಲದು. ಕಾಲ್ತುಳಿತದಲ್ಲಿ ಅಸುನೀಗಿದವರ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳಲ್ಲಿ ವಿಶ್ವಾಸ ಮೂಡಿಸಬೇಕು. ಅಲ್ಲದೆ, ಕ್ರಿಕೆಟ್ ಪ್ರೇಮಿಗಳಲ್ಲಿಯೂ ಸುರಕ್ಷತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ಷಿಪ್ರ ಗತಿಯಲ್ಲಿ ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವೀರಪ್ಪ ಮೊಯ್ಲಿ ಕೋರಿದ್ದಾರೆ.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದು ಮಾತ್ರ ಸಾಕಾಗುವುದಿಲ್ಲ, ಸಂತ್ರಸ್ತರ ಮತ್ತು ಗಾಯಗೊಂಡವರ ಕುಟುಂಬಗಳ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮೊಯ್ಲಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಬೆಂಗಳೂರಿನಿಂದ ಬೇರೆ ಸ್ಥಳಗಳಿಗೆ ಕ್ರಿಕೆಟ್ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಹರಡುತ್ತಿರುವ ಊಹಾಪೋಹಗಳನ್ನು ಅನಾರೋಗ್ಯಕರ ಎಂದು ಬಣ್ಣಿಸಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಯೋಜಿಸುವ ಭರವಸೆ ನೀಡಬೇಕು ಎಂದು ಹೇಳಿದರು.
Stampede Incident Tarnishes Govt’s Image, Hurts Congress Reputation, Former CM Veerappa Moily Urges CM Siddaramaiah for Judicial Probe.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm