ಬ್ರೇಕಿಂಗ್ ನ್ಯೂಸ್
14-06-25 02:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 14 : ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ಕಡೆಯಿಂದ ವಿವಿಧ ಮಾದರಿಯ ತನಿಖೆ ನಡೆಸುವ ಬದಲು ನಿವೃತ್ತ ನ್ಯಾಯಾಧೀಶರಿಂದ ಒಂದೇ ರೀತಿಯ ತನಿಖೆ ನಡೆಸಬೇಕು. ಆ ಬಗ್ಗೆ ಶೀಘ್ರದಲ್ಲೇ ವರದಿ ತರಿಸಿಕೊಂಡು ಸಾರ್ವಜನಿಕರು ಮತ್ತು ಕ್ರಿಕೆಟ್ ಪ್ರೇಮಿಗಳಲ್ಲಿ ವಿಶ್ವಾಸ ಮೂಡಿಸಲು ಸರಕಾರ ಕ್ರಮ ವಹಿಸಬೇಕು ಎಂದು ವೀರಪ್ಪ ಮೊಯ್ಲಿ ಸಲಹೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ಪುಟಗಳ ಪತ್ರ ಬರೆದಿರುವ ವೀರಪ್ಪ ಮೊಯ್ಲಿ, ಕಾಲ್ತುಳಿತ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಮೂರು ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಪ್ರಕಟಿಸಿರುವುದು ಸರಿಯಲ್ಲ. ಇದರಿಂದ ಸರಕಾರದ ಆಡಳಿತಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆಗಳಿವೆ. ಹೀಗಾಗಿ ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಕಾಲ್ತುಳಿತದ ಆಕಸ್ಮಿಕ ಘಟನೆಯಿಂದಾಗಿ ಅನೇಕ ದಶಕಗಳಿಂದ ಗಳಿಸಿದ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಅಳಿಸಿ ಹಾಕಬಾರದು. ಈ ಬಗ್ಗೆ ವಿಶೇಷ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳುವ ಅನಿವಾರ್ಯತೆಯಿದೆ. ದುರ್ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆಯ ಮೇಲೆ ಕೆಟ್ಟ ಹೆಸರು ಬಂದಿದೆ. ಆ ಕೆಟ್ಟ ಹೆಸರನ್ನು ಅಳಿಸಿ ಹಾಕಬೇಕು ಎಂದು ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ.
ಆರ್ಸಿಬಿ ವಿಜಯೋತ್ಸವವನ್ನು ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ನಡೆದಿದೆ, ಇದು ಸಲ್ಲದು. ಕಾಲ್ತುಳಿತದಲ್ಲಿ ಅಸುನೀಗಿದವರ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳಲ್ಲಿ ವಿಶ್ವಾಸ ಮೂಡಿಸಬೇಕು. ಅಲ್ಲದೆ, ಕ್ರಿಕೆಟ್ ಪ್ರೇಮಿಗಳಲ್ಲಿಯೂ ಸುರಕ್ಷತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ಷಿಪ್ರ ಗತಿಯಲ್ಲಿ ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವೀರಪ್ಪ ಮೊಯ್ಲಿ ಕೋರಿದ್ದಾರೆ.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದು ಮಾತ್ರ ಸಾಕಾಗುವುದಿಲ್ಲ, ಸಂತ್ರಸ್ತರ ಮತ್ತು ಗಾಯಗೊಂಡವರ ಕುಟುಂಬಗಳ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮೊಯ್ಲಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಬೆಂಗಳೂರಿನಿಂದ ಬೇರೆ ಸ್ಥಳಗಳಿಗೆ ಕ್ರಿಕೆಟ್ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಹರಡುತ್ತಿರುವ ಊಹಾಪೋಹಗಳನ್ನು ಅನಾರೋಗ್ಯಕರ ಎಂದು ಬಣ್ಣಿಸಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಯೋಜಿಸುವ ಭರವಸೆ ನೀಡಬೇಕು ಎಂದು ಹೇಳಿದರು.
Stampede Incident Tarnishes Govt’s Image, Hurts Congress Reputation, Former CM Veerappa Moily Urges CM Siddaramaiah for Judicial Probe.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm