ಬ್ರೇಕಿಂಗ್ ನ್ಯೂಸ್
15-06-25 09:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಗಳೂರಿನಲ್ಲಿ ಹಲವೆಡೆ ಧರೆ ಕುಸಿತ ಉಂಟಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಗುಡ್ಡದ ಬದಿಯಿರುವ ಮನೆಯೊಂದಕ್ಕೆ ಕಾಂಕ್ರೀಟ್ ತಡೆಗೋಡೆ ಮತ್ತು ಮಣ್ಣು ಕುಸಿದು ಬಿದ್ದಿದ್ದು, ಇಡೀ ಮನೆಯೇ ಕುಸಿದು ಹೋಗುವ ಅಪಾಯಕ್ಕೀಡಾಗಿದೆ.
ಕದ್ರಿ ಪಾರ್ಕ್ ಕೆಳಭಾಗದ ಬೃಹತ್ ಅಪಾರ್ಟ್ಮೆಂಟ್ ಬಳಿಯೇ ಗುಡ್ಡದ ಬದಿಯಲ್ಲಿ ಉಷಾ ಅಶೋಕ್ ಎಂಬವರ ಮನೆಯಿದ್ದು, ಶನಿವಾರವೇ ಗುಡ್ಡ ಮತ್ತು ಮೇಲ್ಭಾಗದಲ್ಲಿ ಹಾಕಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಮನೆಯ ಕೆಳಭಾಗದಲ್ಲಿ ಗುಂಡಿಯಿದ್ದು, ಮೇಲ್ಭಾಗದ ಮಣ್ಣು ಮತ್ತು ಮರ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಅಡುಗೆ ಕೋಣೆಯ ಒಳಗಡೆ ಮಣ್ಣು ತುಂಬಿಕೊಂಡಿದೆ. ಮಳೆನೀರು ಕೂಡ ಬೀಳುತ್ತಿದೆ. ಮನೆಯ ಎದುರಿನಲ್ಲಿ ಬಿರುಕು ಬಿಟ್ಟಿದ್ದು ಸಂಪೂರ್ಣ ಕುಸಿದು ಹೋಗುವ ಅಪಾಯದಲ್ಲಿದೆ.



ಈ ಬಗ್ಗೆ ಮಹಾನಗರ ಪಾಲಿಕೆ ದೂರು ನೀಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಬಂದು ಹೋಗಿದ್ದಾರೆಂಬ ಮಾಹಿತಿಯನ್ನು ಉಷಾ ತಿಳಿಸಿದ್ದಾರೆ. ಆದರೆ ಮನೆಯಲ್ಲಿ ಉಳಿಯುವ ಸ್ಥಿತಿ ಇಲ್ಲ. ಹೀಗಾಗಿ ಪಕ್ಕದ ಬೇರೊಂದು ಮನೆಯಲ್ಲಿ ರಾತ್ರಿ ವೇಳೆ ಆಶ್ರಯ ಪಡೆಯುತ್ತಿದ್ದಾರೆ. ಉಷಾ ಅವರ ಪತಿ ಅಶೋಕ್ ಅನಾರೋಗ್ಯದಲ್ಲಿದ್ದು ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದಾರೆ. ಇಬ್ಬರು ಮಕ್ಕಳಿದ್ದರೂ, ಬಡ ಕುಟುಂಬಕ್ಕೆ ಆಸರೆ ಇಲ್ಲದಾಗಿದೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತುರ್ತಾಗಿ ವ್ಯವಸ್ಥೆ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ.
Continuous heavy rainfall over the past two days has triggered multiple instances of landslides across Mangaluru city. One such alarming incident occurred in Kadri Kaibattal, where a concrete retaining wall and a large mass of earth collapsed onto a house, putting the entire structure at risk of falling.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm