ಬ್ರೇಕಿಂಗ್ ನ್ಯೂಸ್
15-06-25 11:04 pm Mangalore Correspondent ಕರಾವಳಿ
ಉಳ್ಳಾಲ, ಜೂ.15 : ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನ ಖಾಸಗಿ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಕಸ್ಮಿಕ ನಡೆದಿದ್ದು, ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಬೆಂಕಿ ನಂದಿಸಿದ ಪರಿಣಾಮ ಕಟ್ಟಡದಲ್ಲಿದ್ದ 147 ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ.
ಇಂದು ಸಂಜೆ 7.45 ರ ಹೊತ್ತಿಗೆ ಕಟ್ಟಡದ ನೆಲ ಮಹಡಿಯ ಸ್ವಿಚ್ ಬೋರ್ಡಿನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಬೆಂಕಿ ವ್ಯಾಪಿಸಿದೆ. ತಕ್ಷಣವೇ ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸುವ ಸಾಧನಗಳನ್ನ ತಂದು ಬೆಂಕಿ ನಂದಿಸಿದ್ದಾರೆ. ಬೆಂಕಿ ನಂದಿಸಿದ ಬಳಿಕ ಕಟ್ಟಡದ ಅಂತಸ್ತಿನ ಕೋಣೆಗಳಲ್ಲಿದ್ದ 147 ವಿದ್ಯಾರ್ಥಿನಿಯರನ್ನ ಸುರಕ್ಷಿತವಾಗಿ ಹೊರ ತಂದಿದ್ದಾರೆ.









ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳವು ಕೊಂಚ ವಿಳಂಬವಾಗಿ ಬಂದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳ ಬರುವಷ್ಟರಲ್ಲಿ ಭಾಗಶಃ ಬೆಂಕಿಯನ್ನು ಸ್ಥಳೀಯರೇ ನಂದಿಸುವಲ್ಲಿ ಸಫಲರಾಗಿದ್ದರು. ಕಟ್ಟಡದಲ್ಲಿದ್ದ ಎಲ್ಲಾ ವಿದ್ಯಾರ್ಥಿನಿಯರನ್ನ ನರ್ಸಿಂಗ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಬೇರೆ ಹಾಸ್ಟೆಲ್ ಗಳಿಗೆ ಸ್ಥಳಾಂತರಿಸಿದ್ದಾರೆ.
ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿಯೆಂಬ ಐದು ಮಹಡಿಯ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳ ಅಂತಸ್ತಿನ ವಿದ್ಯುತ್ ಸ್ವಿಚ್ ಬೋರ್ಡ್ ಗಳೆಲ್ಲವೂ ಸಂಪೂರ್ಣ ಸುಟ್ಟುಹೋಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
A major fire accident caused by an electrical short circuit occurred at a private hostel building in Deralakatte Junction this evening. Thanks to the swift and courageous response of local residents, 147 female nursing students were safely evacuated from the building without any casualties.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm