ಬ್ರೇಕಿಂಗ್ ನ್ಯೂಸ್
15-06-25 11:04 pm Mangalore Correspondent ಕರಾವಳಿ
ಉಳ್ಳಾಲ, ಜೂ.15 : ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನ ಖಾಸಗಿ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಕಸ್ಮಿಕ ನಡೆದಿದ್ದು, ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಬೆಂಕಿ ನಂದಿಸಿದ ಪರಿಣಾಮ ಕಟ್ಟಡದಲ್ಲಿದ್ದ 147 ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ.
ಇಂದು ಸಂಜೆ 7.45 ರ ಹೊತ್ತಿಗೆ ಕಟ್ಟಡದ ನೆಲ ಮಹಡಿಯ ಸ್ವಿಚ್ ಬೋರ್ಡಿನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಬೆಂಕಿ ವ್ಯಾಪಿಸಿದೆ. ತಕ್ಷಣವೇ ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸುವ ಸಾಧನಗಳನ್ನ ತಂದು ಬೆಂಕಿ ನಂದಿಸಿದ್ದಾರೆ. ಬೆಂಕಿ ನಂದಿಸಿದ ಬಳಿಕ ಕಟ್ಟಡದ ಅಂತಸ್ತಿನ ಕೋಣೆಗಳಲ್ಲಿದ್ದ 147 ವಿದ್ಯಾರ್ಥಿನಿಯರನ್ನ ಸುರಕ್ಷಿತವಾಗಿ ಹೊರ ತಂದಿದ್ದಾರೆ.









ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳವು ಕೊಂಚ ವಿಳಂಬವಾಗಿ ಬಂದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳ ಬರುವಷ್ಟರಲ್ಲಿ ಭಾಗಶಃ ಬೆಂಕಿಯನ್ನು ಸ್ಥಳೀಯರೇ ನಂದಿಸುವಲ್ಲಿ ಸಫಲರಾಗಿದ್ದರು. ಕಟ್ಟಡದಲ್ಲಿದ್ದ ಎಲ್ಲಾ ವಿದ್ಯಾರ್ಥಿನಿಯರನ್ನ ನರ್ಸಿಂಗ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಬೇರೆ ಹಾಸ್ಟೆಲ್ ಗಳಿಗೆ ಸ್ಥಳಾಂತರಿಸಿದ್ದಾರೆ.
ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿಯೆಂಬ ಐದು ಮಹಡಿಯ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳ ಅಂತಸ್ತಿನ ವಿದ್ಯುತ್ ಸ್ವಿಚ್ ಬೋರ್ಡ್ ಗಳೆಲ್ಲವೂ ಸಂಪೂರ್ಣ ಸುಟ್ಟುಹೋಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
A major fire accident caused by an electrical short circuit occurred at a private hostel building in Deralakatte Junction this evening. Thanks to the swift and courageous response of local residents, 147 female nursing students were safely evacuated from the building without any casualties.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm