ಬ್ರೇಕಿಂಗ್ ನ್ಯೂಸ್
16-06-25 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆ ಮತ್ತು ಈ ಹಿಂದಿನ ಪೊಲೀಸ್ ಕಮಿಷನರ್ ನಡೆದುಕೊಂಡಿರುವ ರೀತಿ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ದ್ವೇಷ ಭಾಷಣಗಳು, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಈ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡಿದ್ದು ಈ ಬಗ್ಗೆ ಪತ್ರದ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದೇನೆ. ಗಮನಾರ್ಹ ಸಂಗತಿಯೆಂದರೆ, ಸಮಾಜಘಾತುಕ ವದಂತಿ ಹಬ್ಬಿಸುವುದು, ಪ್ರಚೋದನೆಗಳನ್ನು ಮಾಡುತ್ತಿದ್ದರೂ ಹಿಂದಿನ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ತ್ವರಿತ ಕ್ರಮ ಕೈಗೊಂಡಿದ್ದಾರೆ.
ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ಕರಾವಳಿ ಭಾಗದಲ್ಲಿ ಒಂದೆರಡು ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ಮತ್ತು ತ್ವರಿತಗತಿಯಲ್ಲಿ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.
ಆಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ಬಗ್ಗೆ ಗಂಭೀರ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುಟಿ ಖಾದರ್, ತಮ್ಮ ಪತ್ರದಲ್ಲಿ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Speaker UT Khader Writes to Home Minister, Demands Action Against Former Police Officials for Ignoring Hate Speech and Misinformation.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm