ಬ್ರೇಕಿಂಗ್ ನ್ಯೂಸ್
16-06-25 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆ ಮತ್ತು ಈ ಹಿಂದಿನ ಪೊಲೀಸ್ ಕಮಿಷನರ್ ನಡೆದುಕೊಂಡಿರುವ ರೀತಿ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ದ್ವೇಷ ಭಾಷಣಗಳು, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಈ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡಿದ್ದು ಈ ಬಗ್ಗೆ ಪತ್ರದ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದೇನೆ. ಗಮನಾರ್ಹ ಸಂಗತಿಯೆಂದರೆ, ಸಮಾಜಘಾತುಕ ವದಂತಿ ಹಬ್ಬಿಸುವುದು, ಪ್ರಚೋದನೆಗಳನ್ನು ಮಾಡುತ್ತಿದ್ದರೂ ಹಿಂದಿನ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ತ್ವರಿತ ಕ್ರಮ ಕೈಗೊಂಡಿದ್ದಾರೆ.
ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ಕರಾವಳಿ ಭಾಗದಲ್ಲಿ ಒಂದೆರಡು ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ಮತ್ತು ತ್ವರಿತಗತಿಯಲ್ಲಿ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.
ಆಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ಬಗ್ಗೆ ಗಂಭೀರ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುಟಿ ಖಾದರ್, ತಮ್ಮ ಪತ್ರದಲ್ಲಿ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Speaker UT Khader Writes to Home Minister, Demands Action Against Former Police Officials for Ignoring Hate Speech and Misinformation.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm