ಬ್ರೇಕಿಂಗ್ ನ್ಯೂಸ್
16-06-25 11:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 16 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಆಗಿರುವ ಬೆಳವಣಿಗೆ ಮತ್ತು ಈ ಹಿಂದಿನ ಪೊಲೀಸ್ ಕಮಿಷನರ್ ನಡೆದುಕೊಂಡಿರುವ ರೀತಿ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ದ್ವೇಷ ಭಾಷಣಗಳು, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಈ ಹಿಂದಿನ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡಿದ್ದು ಈ ಬಗ್ಗೆ ಪತ್ರದ ಮೂಲಕ ತಮ್ಮ ಗಮನಕ್ಕೆ ತರುತ್ತಿದ್ದೇನೆ. ಗಮನಾರ್ಹ ಸಂಗತಿಯೆಂದರೆ, ಸಮಾಜಘಾತುಕ ವದಂತಿ ಹಬ್ಬಿಸುವುದು, ಪ್ರಚೋದನೆಗಳನ್ನು ಮಾಡುತ್ತಿದ್ದರೂ ಹಿಂದಿನ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ತ್ವರಿತ ಕ್ರಮ ಕೈಗೊಂಡಿದ್ದಾರೆ.
ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ, ಕರಾವಳಿ ಭಾಗದಲ್ಲಿ ಒಂದೆರಡು ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ಮತ್ತು ತ್ವರಿತಗತಿಯಲ್ಲಿ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.
ಆಮೂಲಕ ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ಬಗ್ಗೆ ಗಂಭೀರ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುಟಿ ಖಾದರ್, ತಮ್ಮ ಪತ್ರದಲ್ಲಿ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Speaker UT Khader Writes to Home Minister, Demands Action Against Former Police Officials for Ignoring Hate Speech and Misinformation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm