ಬ್ರೇಕಿಂಗ್ ನ್ಯೂಸ್
18-06-25 02:10 pm Mangalore Correspondent ಕರಾವಳಿ
ಮಂಗಳೂರು, ಜೂನ್ 18 : ಹಿಂದು ಕಾರ್ಯಕರ್ತರ ಮನೆಗಳಿಗೆ ಮಧ್ಯರಾತ್ರಿ ಪೊಲೀಸರು ಭೇಟಿ ನೀಡಿ ಕಿರುಕುಳ ನೀಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತನಿಖಾ ವಿಭಾಗದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ದ ತನಿಖೆ ಆರಂಭಿಸಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ನೀಡಿದ್ದ ದೂರು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಸಂತ್ರಸ್ತರು ಮತ್ತು ಪೊಲೀಸರನ್ನು ತನಿಖೆಗೊಳಪಡಿಸಿ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ತನಿಖಾ ವಿಭಾಗದ ಡಿಜಿಗೆ ಪತ್ರ ಬರೆದು ಸೂಚಿಸಿದೆ. ಮಾನವ ಹಕ್ಕು ಆಯೋಗದ ಅಧಿಕಾರಿಗಳು ಶಾಸಕ ಭರತ್ ಶೆಟ್ಟಿ ಅವರನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ.
ಪ್ರಕರಣವನ್ನು ಗಂಭೀರ ಪರಿಗಣಿಸಿ ಸ್ಥಳ ಪರಿಶೀಲನೆ, ಪೊಲೀಸರ ದಾಖಲೆ ಪರಿಶೀಲನೆ ಮತ್ತು ಎಲ್ಲಾ ಸಂತ್ರಸ್ತರ ಹೇಳಿಕೆಗಳನ್ನು ಆಧರಿಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಎನ್ಹೆಚ್ಆರ್ಸಿ ಸೂಚಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಸಾರ್ವಜನಿಕರು, ಸಮಾಜ ಸೇವಕರು ಒಂದು ಸಮುದಾಯದ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳು ಕಾನೂನುಬಾಹಿರ ನಿಗಾ ಮತ್ತು ತಡರಾತ್ರಿ ಪೊಲೀಸ್ ಭೇಟಿಗೆ ಒಳಗಾಗುತ್ತಿದ್ದಾರೆ. ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ವ್ಯಕ್ತಿಗಳ ಮನೆಗೆ ರಾತ್ರಿ 11 ಗಂಟೆ ನಂತರ ಪೊಲೀಸರು ಹೋಗುವುದು ಮಾನವ ಹಕ್ಕು ಉಲ್ಲಂಘನೆಯೆಂದು ಶಾಸಕ ಭರತ್ ಶೆಟ್ಟಿ ದೂರು ನೀಡಿದ್ದರು.
ಯಾವುದೇ ಅಪರಾಧ ಹಿನ್ನೆಲೆ, ಎಫ್ಐಆರ್ ಅಥವಾ ತನಿಖೆ ಇಲ್ಲದೇ ಪೊಲೀಸರು ಹಿಂದು ಸಂಘಟನೆಗಳ ನಾಯಕರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಪೊಲೀಸರು ಯಾವುದೇ ವಾರೆಂಟ್ ಅಥವಾ ಕಾನೂನು ದಾಖಲೆ ನೀಡದೆ ಮನೆಗಳಿಗೆ ಹೋಗಿ ಛಾಯಾಚಿತ್ರ ತೆಗೆದು ಜಿಪಿಎಸ್ ಸ್ಥಳ ಮಾಹಿತಿ ಸಂಗ್ರಹಿಸಿ ಪ್ರಶ್ನೆ ಮಾಡಿದ್ದಾರೆ ಎಂಬ ವಿಚಾರ ಇತ್ತೀಚೆಗೆ ತೀವ್ರ ವಿವಾದಕ್ಕೆ ಒಳಗಾಗಿತ್ತು.
The National Human Rights Commission (NHRC) has launched a formal investigation into allegations that police officers in Dakshina Kannada district visited the homes of Hindu activists during late-night hours, reportedly causing distress and violating civil rights. The NHRC’s investigation wing officials have arrived in Mangaluru to initiate a detailed inquiry into the conduct of the local police.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 07:37 pm
Mangalore Correspondent
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm