ಬ್ರೇಕಿಂಗ್ ನ್ಯೂಸ್
19-06-25 07:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 19 : ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಘಟನೆಗೆ ಕಾರು ಚಾಲಕನಾಗಿದ್ದ ಅಮನ್ ರಾವ್ ಮದ್ಯಪಾನ ಮಾಡಿ ಅತಿ ವೇಗದಲ್ಲಿ ಕಾರು ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕ ಅಮನ್ ರಾವ್ (22) ಮತ್ತು ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ (24) ಮೃತಪಟ್ಟಿದ್ದು ಸಹ ಪ್ರಯಾಣಿಕರಾದ ಆಶಿಶ್(23) ಮತ್ತು ವಿದೇಶಿ ಪ್ರಜೆ ಜೆರಿ (23) ಎಂಬವರು ಗಾಯಗೊಂಡಿದ್ದರು. ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನ ಚಾಲಕ ಮದ್ಯ ಸೇವಿಸಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಮೋಟಾರು ವಾಹನ ಕಾಯಿದೆ ಅನ್ವಯ ಕಲಂ 185 ಮತ್ತು 183 ಪ್ರಕಾರ ಕೇಸು ದಾಖಲಿಸಲಾಗಿದೆ.


ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಬಿತರ ಮೇಲೆ ಪ್ರಭಾವ ಬಿದ್ದು ದುಃಖ ಅನುಭವಿಸುವಂತಾಗುತ್ತದೆ. ಮದ್ಯ ಸೇವಿಸಿ ವಾಹನ ಚಲಾಯಿಸಿದಲ್ಲಿ ಮೋಟಾರು ವಾಹನ ಕಾಯಿದೆಯಡಿ ಪ್ರಕರಣ ದಾಖಲಿಸಿ ರು. 10,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಮತ್ತು ಕುಟುಂಬಸ್ಥರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದಕ್ಕಾಗಿ ಅತೀ ವೇಗದಿಂದ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 183 ಅನ್ವಯ ಪ್ರಕರಣ ದಾಖಲಿಸಿ 2/3/LMV- ವಾಹನಗಳಿಗೆ ರೂ 1,000/-, HMV/HGV/OTHERS- ವಾಹನಗಳಿಗೆ 2,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
ಆದುದರಿಂದ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ಅತೀವೇಗದಿಂದ (Over Speed) ವಾಹನ ಚಾಲನೆ ಮಾಡದೇ ಎಚ್ಚರದಿಂದ ವಾಹನ ಚಾಲನೆ ಮಾಡುವಂತೆ ಸಾರ್ವಜನಿಕರಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸೂಚಿಸಿದ್ದಾರೆ.
A tragic road accident near Jeppinamogaru claimed the lives of two young men after a car, driven at high speed, lost control and crashed into a road divider. The Mangaluru Traffic South Police have confirmed that the accident occurred due to drunk driving and over-speeding by the driver.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm