ಬ್ರೇಕಿಂಗ್ ನ್ಯೂಸ್
19-06-25 07:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 19 : ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಘಟನೆಗೆ ಕಾರು ಚಾಲಕನಾಗಿದ್ದ ಅಮನ್ ರಾವ್ ಮದ್ಯಪಾನ ಮಾಡಿ ಅತಿ ವೇಗದಲ್ಲಿ ಕಾರು ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕ ಅಮನ್ ರಾವ್ (22) ಮತ್ತು ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ (24) ಮೃತಪಟ್ಟಿದ್ದು ಸಹ ಪ್ರಯಾಣಿಕರಾದ ಆಶಿಶ್(23) ಮತ್ತು ವಿದೇಶಿ ಪ್ರಜೆ ಜೆರಿ (23) ಎಂಬವರು ಗಾಯಗೊಂಡಿದ್ದರು. ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನ ಚಾಲಕ ಮದ್ಯ ಸೇವಿಸಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಮೋಟಾರು ವಾಹನ ಕಾಯಿದೆ ಅನ್ವಯ ಕಲಂ 185 ಮತ್ತು 183 ಪ್ರಕಾರ ಕೇಸು ದಾಖಲಿಸಲಾಗಿದೆ.


ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಬಿತರ ಮೇಲೆ ಪ್ರಭಾವ ಬಿದ್ದು ದುಃಖ ಅನುಭವಿಸುವಂತಾಗುತ್ತದೆ. ಮದ್ಯ ಸೇವಿಸಿ ವಾಹನ ಚಲಾಯಿಸಿದಲ್ಲಿ ಮೋಟಾರು ವಾಹನ ಕಾಯಿದೆಯಡಿ ಪ್ರಕರಣ ದಾಖಲಿಸಿ ರು. 10,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಮತ್ತು ಕುಟುಂಬಸ್ಥರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದಕ್ಕಾಗಿ ಅತೀ ವೇಗದಿಂದ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 183 ಅನ್ವಯ ಪ್ರಕರಣ ದಾಖಲಿಸಿ 2/3/LMV- ವಾಹನಗಳಿಗೆ ರೂ 1,000/-, HMV/HGV/OTHERS- ವಾಹನಗಳಿಗೆ 2,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
ಆದುದರಿಂದ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ಅತೀವೇಗದಿಂದ (Over Speed) ವಾಹನ ಚಾಲನೆ ಮಾಡದೇ ಎಚ್ಚರದಿಂದ ವಾಹನ ಚಾಲನೆ ಮಾಡುವಂತೆ ಸಾರ್ವಜನಿಕರಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸೂಚಿಸಿದ್ದಾರೆ.
A tragic road accident near Jeppinamogaru claimed the lives of two young men after a car, driven at high speed, lost control and crashed into a road divider. The Mangaluru Traffic South Police have confirmed that the accident occurred due to drunk driving and over-speeding by the driver.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm