ಬ್ರೇಕಿಂಗ್ ನ್ಯೂಸ್
21-06-25 12:03 pm HK News Desk ಕರಾವಳಿ
ಹಾಸನ, ಜೂನ್ 21: ಸಕಲೇಶಪುರ ತಾಲೂಕಿನ ಎಡಕುಮೇರಿ ಬಳಿ ರೈಲ್ವೇ ಹಳಿಗೆ ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿದ್ದು ಮಂಗಳೂರು - ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಂಡೆ ಉರುಳಿ ಬಿದ್ದಿರುವುದರಿಂದ ರೈಲ್ವೇ ಹಳಿ ಡ್ಯಾಮೇಜ್ ಆಗಿದ್ದು ಬೆಂಗಳೂರಿನಿಂದ ಬಂದಿದ್ದ ರೈಲುಗಳು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ನಿಂತಿವೆ.
ಹಾಸನ ಜಿಲ್ಲೆಯ ಮಲೆನಾಡು ಮತ್ತು ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ನಿನ್ನೆ ರಾತ್ರಿ ರೈಲು ಹಳಿಗೆ ಕಲ್ಲು ಬಂಡೆ ಕುಸಿದು ಬಿದ್ದಿದೆ. ಇದರಿಂದಾಗಿ ರಾತ್ರಿಯಿಂದಲೂ ಪ್ರಯಾಣಿಕರು ರೈಲಿನಲ್ಲಿ ಕುಳಿತಿದ್ದು ಹೈರಾಣಾಗಿದ್ದಾರೆ. ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬೆಳಗ್ಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾರೆ.




ಬೆಂಗಳೂರು- ಕಣ್ಣೂರು ರೈಲು ಮತ್ತು ಬೆಂಗಳೂರು- ಮುರುಡೇಶ್ವರ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಪ್ರಯಾಣಿಕರು ನಡುವೆ ಸಿಕ್ಕಿಬೀಳುವಂತಾಗಿದೆ. ರೈಲ್ವೇ ಸಿಬ್ಬಂದಿಗಳು ಗುಡ್ಡ ತೆರವುಗೊಳಿಸುತ್ತಿದ್ದು ಮಧ್ಯಾಹ್ನ ವೇಳೆಗೆ ತೆರವಾಗುವ ಸಾಧ್ಯತೆಯಿದೆ.
ರೈಲು ಹಳಿಯ ಮೇಲೆ ಬಿದ್ದಿದ್ದ ಬಂಡೆಗಳ ಅನತಿ ದೂರದಲ್ಲಿ ರೈಲು ಬಂದು ನಿಂತಿದ್ದು ರಾತ್ರಿ ವೇಳೆ ಲೋಕೊ ಪೈಲಟ್ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ.
Train services between Mangaluru and Bengaluru came to a standstill late Friday night after a large boulder fell onto the railway track near Sakleshpur. The incident occurred along the ghat section, a stretch known for its steep terrain and frequent landslides, especially during the monsoon season.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm