ಬ್ರೇಕಿಂಗ್ ನ್ಯೂಸ್
10-08-20 05:37 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 9: ಯಾವತ್ತೂ ಮಲ್ಲಿಗೆ ಹೂವಿನ ಕೊರತೆಯನ್ನೇ ಎದುರಿಸಿರದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿ ಈ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ಮಲ್ಲಿಗೆ ಅಟ್ಟೆಯ ಅಭಾವ ಕಂಡಿದ್ದಳಂತೆ. ದೇವಿಯ ಪೂಜೆಗೂ ಹೀಗಾಯ್ತಲ್ಲ ಅಂತ ಅಲ್ಲಿನ ಅರ್ಚಕರು ಮರುಕವನ್ನೂ ಪಟ್ಟಿದ್ದರಂತೆ. ಈ ಮಾತು ಕೇಳಿದ ಶಾಸಕರೊಬ್ವರ ಮನವೂ ಕರಗಿತ್ತಂತೆ..
ಹೌದು.. ಮೂಲ್ಕಿ ಸೀಮೆಯ ತಾಯಿ ಬಪ್ಪನಾಡು ದೇವಿಗೆ ಇನ್ನು ಯಾವತ್ತೂ ಮಲ್ಲಿಗೆಯ ಕೊರತೆ ಎದುರಾಗಬಾರದು. ಯಾವುದೇ ಲಾಕ್ ಡೌನ್ ಬರಲಿ, ಮುಷ್ಕರವೇ ಎದುರಾಗಲಿ.. ಪ್ರತಿ ದಿನವೂ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲೇಬೇಕು ಎಂದು ನಿರ್ಧರಿಸಿದ್ದು ಮೂಡುಬಿದ್ರೆಯ ಮಾಜಿ ಶಾಸಕ ಅಭಯಚಂದ್ರ ಜೈನ್. ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕರ ಮಾತು ಕೇಳಿದ ಅಭಯಚಂದ್ರ ಜೈನ್, ವರ್ಷದ 365 ದಿನವೂ ತಾನೇ ಮಲ್ಲಿಗೆ ಅಟ್ಟೆ ಅರ್ಪಿಸುತ್ತೇನೆ ಎಂದು ಅಭಯ ನೀಡಿದ್ದಾರೆ.


ಆದರೆ, ಅಭಯರು ತಾವು ಅರ್ಪಿಸುವ ಮಲ್ಲಿಗೆ ಅಟ್ಟೆಯ ಅರ್ಪಣೆಯ ಹಿಂದೆ ರಾಜಕೀಯ ಉದ್ದೇಶ ಇಟ್ಟುಕೊಂಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸಾರಥ್ಯ ವಹಿಸಿರುವ ಡಿ.ಕೆ.ಶಿವಕುಮಾರ್ ಹೆಸರಲ್ಲಿ ಮಲ್ಲಿಗೆ ಅಟ್ಟೆ ದೇವಿಗೆ ಅರ್ಪಣೆಯಾಗಲಿ ಎಂದಿದ್ದಾರೆ. ತಮ್ಮ ಹೆಸರು ಬೇಡ. ಡಿಕೆಶಿ ಹೆಸರಿನಲ್ಲಿಯೇ ದೇವಿಗೆ ಮಲ್ಲಿಗೆ ಸೇವೆ ರೂಪದಲ್ಲಿ ಅರ್ಪಿಸುವುದಾಗಿ ದೇವಸ್ಥಾನದಲ್ಲಿ ಬರೆಸಿಕೊಂಡಿದ್ದಾರಂತೆ. ದೇವಿಯ ಅಭಯ ಡಿಕೆಶಿಗೆ ಸದಾ ಇರಲೆಂದು ಅಭಯರು ಹಾರೈಸಿದ್ದಾರೆಂದು ಜೈನರ ಆಪ್ತರು ತಿಳಿಸಿದ್ದಾರೆ.
ಮುಲ್ಕಿ ಅರಸರಾದ ದುಗ್ಗಣ್ಣ ಸಾವಂತರ ಸಮ್ಮುಖದಲ್ಲಿ ಅಭಯಚಂದ್ರ ಜೈನ್ ಮತ್ತು ಕಾಂಗ್ರೆಸ್ ಪ್ರಮುಖರು ಸೇರಿ ಮಲ್ಲಿಗೆ ಸೇವೆ ಅರ್ಪಿಸಿದ್ದು ವಿಶೇಷ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm