ಬ್ರೇಕಿಂಗ್ ನ್ಯೂಸ್
24-06-25 11:19 am Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಇರಾನ್ ಸೇನಾ ಪಡೆಗಳು ಕತಾರ್ ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ಎಸಗಿರುವ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿರುವ ರಾಷ್ಟ್ರಗಳು ತಮ್ಮ ವಾಯು ಮಾರ್ಗವನ್ನು ಮುಚ್ಚಿದ್ದು, ವಿಮಾನ ಸಂಚಾರ ಅಸ್ತವ್ಯಸ್ತವಾಗಿದೆ. ಕತಾರ್, ಬೆಹ್ರೈನ್, ಯುಎಇ, ಇರಾಕ್ ಮತ್ತು ಕುವೈತ್ ದೇಶಗಳು ತಮ್ಮ ವಾಯುಮಾರ್ಗದಲ್ಲಿ ಯಾವುದೇ ರೀತಿಯ ವಿಮಾನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಕಟಿಸಿದ್ದು, ಮಂಗಳೂರು, ಮುಂಬೈ, ದೆಹಲಿಯಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರಕ್ಕೆ ಬ್ರೇಕ್ ಬಿದ್ದಿದೆ.
ಗಲ್ಫ್ ರಾಷ್ಟ್ರಗಳ ಹಲವೆಡೆ ಅಮೆರಿಕದ ಸೇನಾ ನೆಲೆಗಳಿದ್ದು ಇವುಗಳನ್ನು ಇರಾನ್ ಟಾರ್ಗೆಟ್ ಮಾಡಿದೆ. ನಿನ್ನೆ ರಾತ್ರಿ ದಿಢೀರ್ ಆಗಿ ಕತಾರ್ ರಾಜಧಾನಿ ದೋಹಾ ಬಳಿಯಿರುವ ಅಮೆರಿಕ ಸೇನಾ ನೆಲೆಗೆ ಇರಾನ್ ಬಾಂಬ್ ದಾಳಿ ನಡೆಸಿದೆ. ಆದರೆ ಇರಾನ್ ದಾಳಿಗೆ ಕತಾರ್ ಖಂಡನೆ ವ್ಯಕ್ತಪಡಿಸಿದ್ದು, ಈ ರೀತಿಯ ನಡೆ ನಮ್ಮ ಸಾರ್ವಭೌಮತೆಗೆ ಧಕ್ಕೆ ತಂದಿದೆ. ನಮ್ಮ ವಾಯುಮಾರ್ಗ ಪ್ರವೇಶಿಸಿ ದಾಳಿ ನಡೆಸಿರುವುದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧ ಎಂದು ಹೇಳಿದೆ. ಗಲ್ಫ್ ರಾಷ್ಟ್ರಗಳಲ್ಲಿ ಅತ್ಯಂತ ಬಿಝಿ ಏರ್ಪೋರ್ಟ್ ಆಗಿರುವ ದೋಹಾದಲ್ಲಿ ವಿಮಾನ ಸಂಚಾರ ನಿರ್ಬಂಧಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣ ಬಂದ್ ಮಾಡಲಾಗಿದೆ. ಇದರ ಬೆನ್ನಲ್ಲೇ ಕುವೈತ್, ಯುಎಇ, ಬೆಹ್ರೈನ್ ಕೂಡ ತಮ್ಮ ವಾಯು ಮಾರ್ಗ ನಿಲ್ಲಿಸಿದ್ದು, ತಮ್ಮಲ್ಲಿಗೆ ಬರುತ್ತಿದ್ದ ವಿಮಾನಗಳನ್ನು ಹಿಂದಕ್ಕೆ ಕಳಿಸಿದೆ.


ಇದೇ ವೇಳೆ ಕತಾರ್ ಮತ್ತು ಅಮೆರಿಕದ ಮಿಲಿಟರಿಗಳು ಇರಾನ್ ದಾಳಿಯಿಂದ ನಮ್ಮ ಸೇನಾ ನೆಲೆಗಳಿಗೆ ಏನೂ ಧಕ್ಕೆಯಾಗಿಲ್ಲ. ಎಲ್ಲವನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ. ಅಲ್ಲದೆ, ಕತಾರ್ ನಲ್ಲಿರುವ ಎಲ್ಲ ನಾಗರಿಕರನ್ನು ಕಟ್ಟಡಗಳ ಒಳಗಡೆಯೇ ಇರುವಂತೆ ಸೂಚಿಸಲಾಗಿದ್ದು, ಎಲ್ಲ ಕಾರ್ಯ ಚಟುವಟಿಕೆಗಳನ್ನು ನಿಲ್ಲಿಸಲು ಸೂಚಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುತ್ತಿದ್ದ ಎಲ್ಲ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ದಮಾಮ್ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಮಸ್ಕತ್ ಡೈವರ್ಟ್ ಮಾಡಲಾಗಿತ್ತು. ಅಬುಧಾಬಿ ಹೊರಟಿದ್ದ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇವೆರಡೂ ವಿಮಾನಗಳನ್ನು ಮರಳಿ ಮಂಗಳೂರಿಗೆ ಕರೆತರಲಾಗಿದೆ ಎಂದು ಮಂಗಳೂರು ಏರ್ಪೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಬೈ, ದೆಹಲಿಯಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದ ವಿಮಾನಗಳೂ ವಾಪಾಸಾಗಿದ್ದು, ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಅವರನ್ನು ಮರಳಿ ಬಿಡಲಾಗಿದೆ. ಯುರೋಪ್, ಅಮೆರಿಕ ತೆರಳುವ ವಿಮಾನಗಳು ಮಧ್ಯ ಪ್ರಾಚ್ಯ ರಾಷ್ಟ್ರಗಳ ಹೊರತಾಗಿ ಸಂಚಾರ ಮಾಡುವಂತಾಗಿವೆ.
Tensions escalated across the Gulf region after Iran launched a surprise missile strike on a US military base near Doha, Qatar, late last night. In response, several Gulf countries—including Qatar, Kuwait, Bahrain, UAE, and Iraq—have closed their airspace to all commercial flights, severely disrupting air travel across the region. Flights departing from Indian cities such as Mangaluru, Mumbai, and Delhi to Gulf destinations were either diverted or returned mid-air
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm