ಬ್ರೇಕಿಂಗ್ ನ್ಯೂಸ್
24-06-25 01:36 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಓದಿನಲ್ಲಿ ವಿಪರೀತ ಒತ್ತಡಕ್ಕೊಳಗಾಗಿ, ತಲೆನೋವಿನಿಂದ ಬಳಲುತ್ತಿದ್ದ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿ ದೇವಿಪುರದ ಶಾರದಾ ವಿದ್ಯಾಲಯದ ಆವರಣದ ಸಿಬ್ಬಂದಿ ವಸತಿ ಗೃಹದಲ್ಲಿ ನಡೆದಿದೆ.
ಮಂಗಳೂರು ಬೆಂದೂರ್ ವೆಲ್ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದ್ವಿತೀಯ ಸಾಲಿನ ಬಿಎ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆಗೈದ ವಿದ್ಯಾರ್ಥಿನಿ.
ತಲಪಾಡಿ ನಾರ್ಲ ನಿವಾಸಿಯಾದ ಶ್ರೇಯಾ ತಾಯಿ ಪುಷ್ಪಲತಾ ಅವರು ದೇವಿಪುರದ ಶಾರದಾ ವಿದ್ಯಾಲಯದಲ್ಲಿ ಅಟೆಂಡರ್ ಕೆಲಸದಲ್ಲಿದ್ದು ಸಂಸ್ಥೆಯ ವಸತಿ ಗೃಹದಲ್ಲೇ ಗಂಡ ಮತ್ತು ಮಕ್ಕಳ ಜೊತೆಯಲ್ಲಿ ನೆಲೆಸಿದ್ದರು.
ಶ್ರೇಯಾ ಎಂದಿನಂತೆ ಸೋಮವಾರ ಬೆಳಗ್ಗೆಯೂ ಕಾಲೇಜಿಗೆ ತೆರಳಿದ್ದಳು. ಸಂಜೆ ಶ್ರೇಯಾ ತಂಗಿ ಶಾಲೆ ಮುಗಿಸಿ ಮನೆಗೆ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಒಳಗೆ ನೋಡಿದಾಗ ಮನೆಯ ಬೆಡ್ ರೂಂನ ಕಿಟಕಿಗೆ ಶ್ರೇಯ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಸಾವಿಗೂ ಮುನ್ನ ಶ್ರೇಯಾ ಬರೆದಿರುವ ಡೆತ್ ನೋಟ್ ಪೊಲೀಸರಿಗೆ ದೊರೆತಿದ್ದು, ಓದಿನಲ್ಲಿ ಕಳೆದ ಎರಡು ತಿಂಗಳಿನಿಂದ ವಿಪರೀತ ಒತ್ತಡ ಎದುರಿಸುತ್ತಿದ್ದು, ಸಹಿಸದ ತಲೆ ನೋವಿನಿಂದ ಬಳುತ್ತಿದ್ದೇನೆಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಶ್ರೇಯಾ ಇತ್ತೀಚೆಗೆ ಬರೆದಿದ್ದ ಪರೀಕ್ಷೆಯಲ್ಲೂ ಒಂದು ವಿಷಯದಲ್ಲಿ ಫೇಲ್ ಆಗಿದ್ದಳಂತೆ. ಉಳ್ಳಾಲ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
A 19-year-old college student from Mangaluru has allegedly died by suicide, reportedly due to academic stress and health issues. The incident occurred in the staff quarters of a private school in Devipura, Talapady. The student, Shreya, was pursuing her second year of Bachelor of Arts at St. Agnes College, Bendorewell. She was the daughter of a staff member at Sharada Vidyalaya, where the family resided.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm