ಬ್ರೇಕಿಂಗ್ ನ್ಯೂಸ್
22-12-20 05:48 pm Mangalore Correspondent ಕರಾವಳಿ
ಮಂಗಳೂರು, ಡಿ.22: ಬ್ರಿಟನ್ನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಆತಂಕ ಸೃಷ್ಟಿಸಿರುವಾಗಲೇ 15 ಮಂದಿ ಇಂಗ್ಲೆಂಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆಂಬ ಮಾಹಿತಿ ಕರಾವಳಿಯಲ್ಲಿ ಆತಂಕ ಸೃಷ್ಟಿಸಿದೆ.
ಎರಡು ದಿನಗಳ ಹಿಂದೆ ಬೆಂಗಳೂರು ಮೂಲಕ 15 ಮಂದಿ ಮಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ ಏಳು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ತೆ ಮಾಡಿದ್ದು, ಇನ್ನೂ ಎಂಟು ಮಂದಿಯ ಪತ್ತೆ ಆಗಿಲ್ಲ ಎನ್ನಲಾಗುತ್ತಿದೆ. ಬ್ರಿಟನ್ನಲ್ಲಿ ಕಟ್ಟೆಚ್ಚರ ಘೋಷಣೆ ಆದಕೂಡಲೇ ಭಾರತ- ಬ್ರಿಟನ್ ನಡುವಿನ ವಿಮಾನ, ಹಡಗು ಸಂಚಾರವನ್ನು ನಿರ್ಬಂಧಿಸಿದೆ.

ಆದರೆ, ಇದಕ್ಕೂ ಮುನ್ನ ಬ್ರಿಟನ್ನಿಂದ ಆಗಮಿಸಿದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ನಡುವೆ, ಕರ್ನಾಟಕ ರಾಜ್ಯಕ್ಕೆ 135 ಮಂದಿ ಇಂಗ್ಲೆಂಡಿನಿಂದ ಆಗಮಿಸಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಿದ್ದು, ಅವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವು ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.

ಮಂಗಳೂರಿಗೆ ಆಗಮಿಸಿದ್ದ 15 ಮಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬಂದಿದ್ದರು ಎನ್ನಲಾಗುತ್ತಿದೆ. ಆದರೂ ತಮ್ಮೂರಿಗೆ ತೆರಳುವ ಮುನ್ನ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂಬ ನಿಯಮ ಪಾಲನೆ ಮಾಡಬೇಕಿದೆ. ಹೊಸ ರೀತಿಯ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಸೇರಿದಂತೆ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರಕಾರ ಸೂಚನೆ ನೀಡಿದೆ.
New Coronavirus Strain fear grips in Mangalore as 15 persons have entered Mangalore coming from UK. 7 have been found and still 8 persons are out of trace it is said.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 12:15 pm
HK News Staffer
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm