ಬ್ರೇಕಿಂಗ್ ನ್ಯೂಸ್
22-12-20 05:48 pm Mangalore Correspondent ಕರಾವಳಿ
ಮಂಗಳೂರು, ಡಿ.22: ಬ್ರಿಟನ್ನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಆತಂಕ ಸೃಷ್ಟಿಸಿರುವಾಗಲೇ 15 ಮಂದಿ ಇಂಗ್ಲೆಂಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆಂಬ ಮಾಹಿತಿ ಕರಾವಳಿಯಲ್ಲಿ ಆತಂಕ ಸೃಷ್ಟಿಸಿದೆ.
ಎರಡು ದಿನಗಳ ಹಿಂದೆ ಬೆಂಗಳೂರು ಮೂಲಕ 15 ಮಂದಿ ಮಂಗಳೂರಿಗೆ ಆಗಮಿಸಿದ್ದಾರೆ. ಈ ಪೈಕಿ ಏಳು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ತೆ ಮಾಡಿದ್ದು, ಇನ್ನೂ ಎಂಟು ಮಂದಿಯ ಪತ್ತೆ ಆಗಿಲ್ಲ ಎನ್ನಲಾಗುತ್ತಿದೆ. ಬ್ರಿಟನ್ನಲ್ಲಿ ಕಟ್ಟೆಚ್ಚರ ಘೋಷಣೆ ಆದಕೂಡಲೇ ಭಾರತ- ಬ್ರಿಟನ್ ನಡುವಿನ ವಿಮಾನ, ಹಡಗು ಸಂಚಾರವನ್ನು ನಿರ್ಬಂಧಿಸಿದೆ.

ಆದರೆ, ಇದಕ್ಕೂ ಮುನ್ನ ಬ್ರಿಟನ್ನಿಂದ ಆಗಮಿಸಿದವರು ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂದು ಸೂಚನೆ ನೀಡಲಾಗಿದೆ. ಈ ನಡುವೆ, ಕರ್ನಾಟಕ ರಾಜ್ಯಕ್ಕೆ 135 ಮಂದಿ ಇಂಗ್ಲೆಂಡಿನಿಂದ ಆಗಮಿಸಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಿದ್ದು, ಅವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವು ಮೊಬೈಲ್ ಸ್ವಿಚ್ ಆಫ್ ಆಗಿದ್ದು ಅಧಿಕಾರಿಗಳನ್ನು ಆತಂಕಕ್ಕೀಡು ಮಾಡಿದೆ.

ಮಂಗಳೂರಿಗೆ ಆಗಮಿಸಿದ್ದ 15 ಮಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬಂದಿದ್ದರು ಎನ್ನಲಾಗುತ್ತಿದೆ. ಆದರೂ ತಮ್ಮೂರಿಗೆ ತೆರಳುವ ಮುನ್ನ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕೆಂಬ ನಿಯಮ ಪಾಲನೆ ಮಾಡಬೇಕಿದೆ. ಹೊಸ ರೀತಿಯ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಸೇರಿದಂತೆ ಆಯಾ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸರಕಾರ ಸೂಚನೆ ನೀಡಿದೆ.
New Coronavirus Strain fear grips in Mangalore as 15 persons have entered Mangalore coming from UK. 7 have been found and still 8 persons are out of trace it is said.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am