ಬ್ರೇಕಿಂಗ್ ನ್ಯೂಸ್
30-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಹಂಚು ಜಾರುವುದನ್ನು ತಿಳಿದು ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತ ತಪ್ಪಿದೆ.
ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 12.30ರ ವೇಳೆಗೆ ಘಟನೆಯಾಗಿದ್ದು ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿದ್ದಂತೆ ಮಕ್ಕಳು ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ತರಗತಿ ಕೊಠಡಿಯಿದ್ದ ಆ ಭಾಗದ ಹಂಚು ಪೂರ್ತಿಯಾಗಿ ಕುಸಿದು ಕೆಳಕ್ಕೆ ಬಿದ್ದಿದೆ.




ಘಟನೆಯಲ್ಲಿ ಶೋನಿತ್ ಎಂಬ ಯುಕೆಜಿ ವಿದ್ಯಾರ್ಥಿಗೆ ತಲೆ ಮತ್ತು ಮುಖಕ್ಕೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಶಾಲೆಯನ್ನು ದುರಸ್ತಿ ಪಡಿಸಲಾಗಿತ್ತು. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಊರವರೇ ಸೇರಿ ಶಾಲೆ ನಡೆಸುತ್ತಿದ್ದೇವೆ
ಹಿಂದೆ ಇದು ಅನುದಾನಿತ ಶಾಲೆಯಾಗಿದ್ದು ಆನಂತರ ಇಲ್ಲಿನ ಮುಖ್ಯ ಶಿಕ್ಷಕಿ ನಿವೃತ್ತಿಯಾದ ಬಳಿಕ ಮತ್ತೆ ಸರ್ಕಾರದಿಂದ ನೇಮಕಾತಿ ಆಗಿರಲಿಲ್ಲ. ಮುಖ್ಯಪ್ರಾಣ ದೇವರ ಹೆಸರಲ್ಲಿದ್ದ ಶಾಲೆ ನಿಲುಗಡೆ ಆಗುತ್ತದೆ ಎನ್ನುವಾಗ ಊರವರು ಸೇರಿ ದಾನಿಗಳ ಸಹಕಾರದಿಂದ ಶಾಲೆಯನ್ನು ಉಳಿಸಿದ್ದೆವು. ಈಗ ಮೂರು ವರ್ಷದಿಂದ ಎಲ್ಕೆಜಿ, ಯುಕೆಜಿ ಮತ್ತು ನರ್ಸರಿ ತರಗತಿಯನ್ನು ಖಾಸಗಿಯಾಗಿಯೇ ನಡೆಸುತ್ತಿದ್ದೇವೆ. ಸರ್ಕಾರದ ಯಾವುದೇ ಅನುದಾನ ಇಲ್ಲ. ಊರಿಗೊಂದು ಶಾಲೆ ಬೇಕೆಂಬ ಕಾಳಜಿಯಿಂದ ಮಾಡುತ್ತಿದ್ದೇವೆ. ಕಳೆದ ವರ್ಷ ನಾವು ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಶಾಲೆ ದುರಸ್ತಿ ಮಾಡಿದ್ದೆವು. ಹಂಚು, ಪಕ್ಕಾಸು ಎಲ್ಲ ಬದಲಾಯಿಸಿದ್ದೆವು. ಈಗ ಸಣ್ಣ ಗಾಳಿಗೆ ಕುಸಿದು ಬಿದ್ದಿದೆ. ಹೇಗೆ ಬಿದ್ದಿದೆ ಎನ್ನುವುದು ಗೊತ್ತಿಲ್ಲ. ಆದರೆ ದೇವರು ಯಾವುದೇ ಅಪಾಯ ಆಗದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 21 ಸಣ್ಣ ಮಕ್ಕಳಿದ್ದರೂ ಒಂದು ಮಗು ಬಿಟ್ಟರೆ ಯಾರಿಗೂ ತೊಂದರೆ ಆಗಿಲ್ಲ ಎಂದು ಸ್ಥಳೀಯರಾದ ವಿಜಯ ಕುಮಾರ್ ಮತ್ತು ಬಾಲು ಪೇಜಾವರ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
A major tragedy was narrowly avoided in Pejavara village on the outskirts of Mangaluru when the roof of a classroom collapsed during school hours due to strong winds. Fortunately, most students had rushed out moments before the collapse, preventing a serious disaster.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm