ಬ್ರೇಕಿಂಗ್ ನ್ಯೂಸ್
30-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಹಂಚು ಜಾರುವುದನ್ನು ತಿಳಿದು ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತ ತಪ್ಪಿದೆ.
ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 12.30ರ ವೇಳೆಗೆ ಘಟನೆಯಾಗಿದ್ದು ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿದ್ದಂತೆ ಮಕ್ಕಳು ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ತರಗತಿ ಕೊಠಡಿಯಿದ್ದ ಆ ಭಾಗದ ಹಂಚು ಪೂರ್ತಿಯಾಗಿ ಕುಸಿದು ಕೆಳಕ್ಕೆ ಬಿದ್ದಿದೆ.




ಘಟನೆಯಲ್ಲಿ ಶೋನಿತ್ ಎಂಬ ಯುಕೆಜಿ ವಿದ್ಯಾರ್ಥಿಗೆ ತಲೆ ಮತ್ತು ಮುಖಕ್ಕೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಶಾಲೆಯನ್ನು ದುರಸ್ತಿ ಪಡಿಸಲಾಗಿತ್ತು. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಊರವರೇ ಸೇರಿ ಶಾಲೆ ನಡೆಸುತ್ತಿದ್ದೇವೆ
ಹಿಂದೆ ಇದು ಅನುದಾನಿತ ಶಾಲೆಯಾಗಿದ್ದು ಆನಂತರ ಇಲ್ಲಿನ ಮುಖ್ಯ ಶಿಕ್ಷಕಿ ನಿವೃತ್ತಿಯಾದ ಬಳಿಕ ಮತ್ತೆ ಸರ್ಕಾರದಿಂದ ನೇಮಕಾತಿ ಆಗಿರಲಿಲ್ಲ. ಮುಖ್ಯಪ್ರಾಣ ದೇವರ ಹೆಸರಲ್ಲಿದ್ದ ಶಾಲೆ ನಿಲುಗಡೆ ಆಗುತ್ತದೆ ಎನ್ನುವಾಗ ಊರವರು ಸೇರಿ ದಾನಿಗಳ ಸಹಕಾರದಿಂದ ಶಾಲೆಯನ್ನು ಉಳಿಸಿದ್ದೆವು. ಈಗ ಮೂರು ವರ್ಷದಿಂದ ಎಲ್ಕೆಜಿ, ಯುಕೆಜಿ ಮತ್ತು ನರ್ಸರಿ ತರಗತಿಯನ್ನು ಖಾಸಗಿಯಾಗಿಯೇ ನಡೆಸುತ್ತಿದ್ದೇವೆ. ಸರ್ಕಾರದ ಯಾವುದೇ ಅನುದಾನ ಇಲ್ಲ. ಊರಿಗೊಂದು ಶಾಲೆ ಬೇಕೆಂಬ ಕಾಳಜಿಯಿಂದ ಮಾಡುತ್ತಿದ್ದೇವೆ. ಕಳೆದ ವರ್ಷ ನಾವು ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಶಾಲೆ ದುರಸ್ತಿ ಮಾಡಿದ್ದೆವು. ಹಂಚು, ಪಕ್ಕಾಸು ಎಲ್ಲ ಬದಲಾಯಿಸಿದ್ದೆವು. ಈಗ ಸಣ್ಣ ಗಾಳಿಗೆ ಕುಸಿದು ಬಿದ್ದಿದೆ. ಹೇಗೆ ಬಿದ್ದಿದೆ ಎನ್ನುವುದು ಗೊತ್ತಿಲ್ಲ. ಆದರೆ ದೇವರು ಯಾವುದೇ ಅಪಾಯ ಆಗದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 21 ಸಣ್ಣ ಮಕ್ಕಳಿದ್ದರೂ ಒಂದು ಮಗು ಬಿಟ್ಟರೆ ಯಾರಿಗೂ ತೊಂದರೆ ಆಗಿಲ್ಲ ಎಂದು ಸ್ಥಳೀಯರಾದ ವಿಜಯ ಕುಮಾರ್ ಮತ್ತು ಬಾಲು ಪೇಜಾವರ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
A major tragedy was narrowly avoided in Pejavara village on the outskirts of Mangaluru when the roof of a classroom collapsed during school hours due to strong winds. Fortunately, most students had rushed out moments before the collapse, preventing a serious disaster.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm