ಬ್ರೇಕಿಂಗ್ ನ್ಯೂಸ್
03-07-25 10:50 pm Mangalore Correspondent ಕರಾವಳಿ
ಮಂಗಳೂರು, ಜುಲೈ 3 : ತನ್ನ ಮಗ ಡ್ರಗ್ಸ್ ವ್ಯಸನಕ್ಕೀಡಾಗಿದ್ದಾನೆಂದು ಆತನ ಹೆತ್ತವರು ಬಂದು ದೂರಿಕೊಂಡ ಹಿನ್ನೆಲೆಯಲ್ಲಿ ಸಿಇಎನ್ ಕ್ರೈಮ್ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 200 ಮಂದಿ ಉದ್ಯೋಗಸ್ಥರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಹೆತ್ತವರ ದೂರಿನಂತೆ ಏನಾಗಿದೆ ಎಂದು ತಿಳಿಯಲು ಸಿಇಎನ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ, ಡ್ರಗ್ಸ್ ಪೂರೈಕೆಯ ಜಾಲ ಗೊತ್ತಾಗಿದ್ದು, 5 ಮಂದಿಯನ್ನು ಬಂಧಿಸಲಾಗಿದೆ. ಅವರಿಂದ 6 ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಂದ ದೂರು ನೀಡಿದ್ದರಿಂದ 200 ಜನಕ್ಕೆ ಡ್ರಗ್ಸ್ ಪೂರೈಸುತ್ತಿದ್ದ ಐವರನ್ನು ಬಂಧಿಸಲಾಗಿದೆ. ಇದೇ ರೀತಿ ಹತ್ತು ಜನ ದೂರು ಕೊಟ್ಟರೆ ಎರಡು ಸಾವಿರ ಮಂದಿಗೆ ಡ್ರಗ್ಸ್ ಪೂರೈಕೆ ಆಗುವುದನ್ನು ತಪ್ಪಿಸಬಹುದು. ನೂರು ಮಂದಿ ಬಂದು ಖಚಿತವಾಗಿ ದೂರು ನೀಡಿದಲ್ಲಿ ಇಡೀ ಮಂಗಳೂರು ನಗರದಲ್ಲಿ ಡ್ರಗ್ಸ್ ಪೂರೈಕೆ ಆಗದಂತೆ ಮಾಡಬಹುದು.


ಹೀಗಾಗಿ ಯಾರೇ ಆದರೂ ಡ್ರಗ್ಸ್ ಬಗ್ಗೆ ಮಾಹಿತಿ ಇದ್ದಲ್ಲಿ ನೇರವಾಗಿ ಬಂದು ಹಂಚಿಕೊಳ್ಳಿ. ಯಾರೇ ಡ್ರಗ್ಸ್ ವ್ಯಸನಿಗಳಿದ್ದರೂ ಅವರನ್ನು ಸಂತ್ರಸ್ತರೆಂದು ಪರಿಗಣಿಸುತ್ತೇವೆ. ಅವರಿಗೆ ಡ್ರಗ್ಸ್ ಪೂರೈಸುವವರನ್ನು ಪೆಡ್ಲರ್ ಗಳೆಂದು ಪರಿಗಣಿಸಿ ಕಠಿಣ ಕ್ರಮ ಜರುಗಿಸುತ್ತೇವೆ. ಡ್ರಗ್ಸ್ ಜಾಲ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಪೊಲೀಸ್ ಕಮಿಷನರ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Acting on a complaint by a distressed parent whose son was addicted to drugs, the Commissionerate’s CEN Crime team launched a special operation. As a result, five drug peddlers—who reputedly supplied narcotics to about 200 working adults and college students—have been arrested, Police Commissioner Sudhir Kumar Reddy announced today.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm