ಬ್ರೇಕಿಂಗ್ ನ್ಯೂಸ್
04-07-25 11:46 am Mangalore Correspondent ಕರಾವಳಿ
ಉಳ್ಳಾಲ, ಜು.4 : ಕುಡಿದ ಮತ್ತಿನಲ್ಲಿ ಮನೆಗೆ ಬಂದು ತಂದೆ ಮತ್ತು ಸಹೋದರನಲ್ಲಿ ಗಲಾಟೆ ಮಾಡಿದ ವ್ಯಕ್ತಿಯೋರ್ವ ಮನೆಯ ಬಾಲ್ಕನಿಗೆ ಅಳವಡಿಸಿದ್ದ ಅಲ್ಯುಮಿನಿಯಮ್ ಗಾಜಿಗೆ ಆವೇಶದಿಂದ ಕೈಯನ್ನ ಬಡಿದ ಪರಿಣಾಮ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಠಾಣೆ ವ್ಯಾಪ್ತಿಯ ಮಾಡೂರು ಅರಸುನಗರ ಎಂಬಲ್ಲಿ ನಡೆದಿದೆ.
ಮಾಡೂರು ಅರಸುನಗರ ನಿವಾಸಿ ನಿತೇಶ್ ನಾಯಕ್(36) ಸಾವನ್ನಪ್ಪಿದ ವ್ಯಕ್ತಿ. ನಿತೇಶ್ ಅವರು ತಂದೆ ಸತೀಶ್ ನಾಯಕ್ ಮತ್ತು ಸಹೋದರ ದುರ್ಗೇಶ್ ಜೊತೆ ಮಾಡೂರು ಅರಸುನಗರದಲ್ಲಿ ವಾಸವಾಗಿದ್ದು ತಂದೆ ಮಕ್ಕಳು ಕರಿದ ತಿಂಡಿ ತಿನಿಸುಗಳನ್ನ ತಯಾರಿಸಿ ಅಂಗಡಿಗಳಿಗೆ ವಿತರಿಸುವ ಉದ್ಯಮ ನಡೆಸುತ್ತಿದ್ದರು.

ನಿತೇಶ್ ಅವರಿಗೆ ಮದುವೆಯಾಗಿದ್ದು 2023 ರಲ್ಲಿ ಪತ್ನಿಯಿಂದ ವಿಚ್ಚೇದನ ಪಡಿದಿದ್ದರು ಎನ್ನಲಾಗಿದೆ. ನಿತೇಶ್ ನಿತ್ಯವೂ ಮದ್ಯಪಾನ ಮಾಡಿ ಬಂದು ಮನೆಯಲ್ಲಿ ತಂದೆ ಮತ್ತು ಅಣ್ಣನಲ್ಲಿ ಗಲಾಟೆ ನಡೆಸಿ ಕಿಟಕಿಗಳ ಗಾಜನ್ನು ಪುಡಿ ಮಾಡುತ್ತಿದ್ದರಂತೆ. ನಿನ್ನೆ ರಾತ್ರಿಯೂ ಸುಮಾರು 9 ಗಂಟೆ ವೇಳೆ ಮನೆಯಲ್ಲಿ ಗಲಾಟೆ ನಡೆದಿದೆ. ನಿತೇಶ್ ತಾಯಿ, ತಂದೆ, ಅಣ್ಣ ಮನೆಯಲ್ಲಿದ್ದ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ನಿತೇಶ್ ಮನೆಯ ಬಾಲ್ಕನಿಗೆ ಅಳವಡಿಸಿದ್ದ ಅಲ್ಯುಮಿನಿಯಮ್ ಪಾರ್ಟಿಷನ್ ನ ಗಾಜಿಗೆ ಬಲವಾಗಿ ಕೈಯಿಂದ ಹೊಡೆದಿದ್ದು ರಕ್ತ ಸ್ರಾವವಾಗಿದೆ. ಮನೆ ಮಂದಿ ಎಂದಿನಂತೆ ಇರುವ ಗಲಾಟೆ ಎಂದು ಗ್ರಹಿಸಿ ಕೋಣೆಯೊಳಗೆ ಸೇರಿದ್ದಾರೆ.
ಕೆಲಹೊತ್ತಿನ ಬಳಿಕ ನಿತೇಶ್ ರಕ್ತಸ್ರಾವವಾಗಿ ಪ್ರಾಣ ಸಂಕಟದಿಂದ ಚೀರಾಡಿದ್ದು ಆತನ ಕೂಗು ಕೇಳಿಸಿ ಮನೆಯ ಕೆಳ ಅಂತಸ್ತಿನಲ್ಲಿ ವಾಸವಿದ್ದ ನಿತೇಶ್ ನ ಚಿಕ್ಕಪ್ಪನ ಮಗಳು ಮೇಲಕ್ಕೆ ಓಡಿ ಬಂದಿದ್ದಾರೆ. ರಕ್ತದ ಮಡುವಿನಲ್ಲಿದ್ದ ನಿತೇಶನ್ನು ಸ್ಥಳೀಯ ಬಜರಂಗದಳದ ಮುಖಂಡ ಅರ್ಜುನ್ ಮಾಡೂರು ಮತ್ತು ಸ್ನೇಹಿತರು ಆಂಬುಲೆನ್ಸಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿತೇಶ್ ಸಾವನ್ನಪ್ಪಿದ್ದಾರೆ.
ವಿಧಿ ವಿಜ್ಞಾನ ತಂಡ ಮತ್ತು ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
In a tragic incident reported from Arasunagara in Madur, Ullal police limits, a 36-year-old man died due to excessive bleeding after slamming his hand on a glass partition in a fit of rage during a drunken altercation with his father and brother on Wednesday night.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm