ಬ್ರೇಕಿಂಗ್ ನ್ಯೂಸ್
04-07-25 10:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 4 : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬರು ಬಂದು ನೀಡಿರುವ ದೂರು ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಈ ಬಗ್ಗೆ ದ.ಕ. ಎಸ್ಪಿ ಡಾ.ಅರುಣ್ ಪ್ರಕಟಣೆ ನೀಡಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವ ಬೆದರಿಕೆ ಒಡ್ಡಿ, ಸದ್ರಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ರೀತಿಯಲ್ಲಿ ಹಲವಾರು ಮೃತದೇಹಗಳನ್ನು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಸದ್ರಿ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ಸಿದ್ಧವಿರುವುದಾಗಿ ಜುಲೈ 3ರಂದು ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.
ದೂರಿನ ಬಗ್ಗೆ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿ ಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಜರಗಿಸಲಾಗುವುದು. ಸದ್ರಿ ದೂರುದಾರರು ದೂರಿನಲ್ಲಿ ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಮೇರೆಗೆ, ದೂರುದಾರರ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.
A First Information Report (FIR) has been registered at the Dharmasthala Police Station based on a chilling complaint submitted by an individual, alleging a series of criminal activities including the secret disposal of multiple dead bodies over the years in Dharmasthala village. Dakshina Kannada Superintendent of Police, Dr. Arun, confirmed the development in an official press release. According to the complaint, the individual alleges that numerous crimes, including murders, have taken place in the area over a long period.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm