ಬ್ರೇಕಿಂಗ್ ನ್ಯೂಸ್
05-07-25 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ.5: ಹಿಂದು ಜಾಗರಣ ವೇದಿಕೆ ಮುಖಂಡನೊಬ್ಬನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು ಕರಾವಳಿಯಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮೂಡುಬಿದ್ರೆಯ ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಎಂಬಾತನ ಮೊಬೈಲ್ ನಲ್ಲಿ ಪೊಲೀಸರ ಪರಿಶೀಲನೆ ವೇಳೆ ಅಶ್ಲೀಲ ವಿಡಿಯೋ ಸಿಕ್ಕಿದೆಯೆಂದು ಪೊಲೀಸರು ಆತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಸಿಕ್ಕಿದ್ದು ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಇದೆಯೆಂದೂ ವದಂತಿ ಹರಡಿದೆ. 2024ರ ನವೆಂಬರ್ ತಿಂಗಳಲ್ಲಿ ಅಪಘಾತ ಪಡಿಸಿದ ಖಾಸಗಿ ಬಸ್ಸೊಂದಕ್ಕೆ ಕಲ್ಲೆಸೆದ ಪ್ರಕರಣದಲ್ಲಿ ಸಮಿತ್ ರಾಜ್ ನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದು ಈ ವೇಳೆ ಮೊಬೈಲ್ ಪರಿಶೀಲನೆ ಮಾಡಿದ್ದರು. ಮೊಬೈಲ್ ಲಾಕ್ ಆಗಿದ್ದರಿಂದ ಕೋರ್ಟ್ ಅನುಮತಿ ಪಡೆದು ಮೊಬೈಲನ್ನು ಹೆಚ್ಚಿನ ಪರಿಶೀಲನೆಗಾಗಿ ಮಂಗಳೂರಿನ ಸೆನ್ ಠಾಣೆಯ ಲ್ಯಾಬ್ ನಲ್ಲಿ ಚೆಕ್ ಮಾಡಲಾಗಿತ್ತು.
ಈ ವೇಳೆ, 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ತುಣುಕು ಪತ್ತೆಯಾಗಿದೆ. ಅಲ್ಲದೆ, ಗಂಡು ಮತ್ತು ಹೆಣ್ಣಿನ ನಗ್ನ ಹಲವಾರು ದೃಶ್ಯಾವಳಿಗಳು ಪತ್ತೆಯಾಗಿದ್ದು ತನ್ನದೇ ಲೈಂಗಿಕ ಸಂಪರ್ಕದ ದೃಶ್ಯಾವಳಿಗಳೂ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಹಿನ್ನೆಲೆಯಲ್ಲಿ ಮೂಡುಬಿದಿರೆ ಠಾಣೆ ಇನ್ಸ್ಪೆಕ್ಟರ್ ಸಂದೇಶ್ ದೂರಿನಂತೆ ಬಿಎನ್ಎಸ್ ಸೆಕ್ಷನ್ 294(ಎ) ಪ್ರಕಾರ ಅಶ್ಲೀಲ ವಿಡಿಯೋಗಳನ್ನು ಹೊಂದಿದ್ದಕ್ಕಾಗಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುವ ಅಥವಾ ಇನ್ಯಾರಿಗೋ ಕಳುಹಿಸಿ ಬೆದರಿಕೆ ಒಡ್ಡುವ ಸಾಧ್ಯತೆ ಇದೆಯೆಂದು ಕೇಸು ದಾಖಲಿಸಲಾಗಿದೆ. ಇಂತಹ ವಿಡಿಯೋಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಸಾಧ್ಯತೆಯಿರುವ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಯಾರೂ ಸಂತ್ರಸ್ತರು ದೂರು ಕೊಟ್ಟಿಲ್ಲ. ಯಾರಾದ್ರೂ ಬ್ಲಾಕ್ಮೇಲ್ ಒಳಗಾದವರು, ಸಂತ್ರಸ್ತರಿದ್ದರೆ ದೂರು ಕೊಟ್ಟರೆ ರೇಪ್ ಕೇಸು ದಾಖಲಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ರಿ ಪ್ರಕರಣದಲ್ಲಿ ಆರೋಪಿ ಜಾಮೀನು ಪಡೆದು ಬಿಡುಗಡೆಗೊಂಡಿದ್ದು ಯಾರಾದ್ರೂ ದೌರ್ಜನ್ಯಕ್ಕೊಳಗಾದವರಿದ್ದರೆ ದೂರು ಕೊಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
A major controversy has erupted in the coastal region after over 50 obscene video clips were allegedly found on the mobile phone of a Hindu Jagarana Vedike leader. An FIR has been registered against the accused, identified as Sumith Raj Daregudde, a prominent figure associated with the organization in Moodbidri.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm