ಬ್ರೇಕಿಂಗ್ ನ್ಯೂಸ್
05-07-25 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ.5: ಹಿಂದು ಜಾಗರಣ ವೇದಿಕೆ ಮುಖಂಡನೊಬ್ಬನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು ಕರಾವಳಿಯಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮೂಡುಬಿದ್ರೆಯ ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಎಂಬಾತನ ಮೊಬೈಲ್ ನಲ್ಲಿ ಪೊಲೀಸರ ಪರಿಶೀಲನೆ ವೇಳೆ ಅಶ್ಲೀಲ ವಿಡಿಯೋ ಸಿಕ್ಕಿದೆಯೆಂದು ಪೊಲೀಸರು ಆತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಸಿಕ್ಕಿದ್ದು ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಇದೆಯೆಂದೂ ವದಂತಿ ಹರಡಿದೆ. 2024ರ ನವೆಂಬರ್ ತಿಂಗಳಲ್ಲಿ ಅಪಘಾತ ಪಡಿಸಿದ ಖಾಸಗಿ ಬಸ್ಸೊಂದಕ್ಕೆ ಕಲ್ಲೆಸೆದ ಪ್ರಕರಣದಲ್ಲಿ ಸಮಿತ್ ರಾಜ್ ನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದು ಈ ವೇಳೆ ಮೊಬೈಲ್ ಪರಿಶೀಲನೆ ಮಾಡಿದ್ದರು. ಮೊಬೈಲ್ ಲಾಕ್ ಆಗಿದ್ದರಿಂದ ಕೋರ್ಟ್ ಅನುಮತಿ ಪಡೆದು ಮೊಬೈಲನ್ನು ಹೆಚ್ಚಿನ ಪರಿಶೀಲನೆಗಾಗಿ ಮಂಗಳೂರಿನ ಸೆನ್ ಠಾಣೆಯ ಲ್ಯಾಬ್ ನಲ್ಲಿ ಚೆಕ್ ಮಾಡಲಾಗಿತ್ತು.
ಈ ವೇಳೆ, 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ತುಣುಕು ಪತ್ತೆಯಾಗಿದೆ. ಅಲ್ಲದೆ, ಗಂಡು ಮತ್ತು ಹೆಣ್ಣಿನ ನಗ್ನ ಹಲವಾರು ದೃಶ್ಯಾವಳಿಗಳು ಪತ್ತೆಯಾಗಿದ್ದು ತನ್ನದೇ ಲೈಂಗಿಕ ಸಂಪರ್ಕದ ದೃಶ್ಯಾವಳಿಗಳೂ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಹಿನ್ನೆಲೆಯಲ್ಲಿ ಮೂಡುಬಿದಿರೆ ಠಾಣೆ ಇನ್ಸ್ಪೆಕ್ಟರ್ ಸಂದೇಶ್ ದೂರಿನಂತೆ ಬಿಎನ್ಎಸ್ ಸೆಕ್ಷನ್ 294(ಎ) ಪ್ರಕಾರ ಅಶ್ಲೀಲ ವಿಡಿಯೋಗಳನ್ನು ಹೊಂದಿದ್ದಕ್ಕಾಗಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುವ ಅಥವಾ ಇನ್ಯಾರಿಗೋ ಕಳುಹಿಸಿ ಬೆದರಿಕೆ ಒಡ್ಡುವ ಸಾಧ್ಯತೆ ಇದೆಯೆಂದು ಕೇಸು ದಾಖಲಿಸಲಾಗಿದೆ. ಇಂತಹ ವಿಡಿಯೋಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಸಾಧ್ಯತೆಯಿರುವ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಯಾರೂ ಸಂತ್ರಸ್ತರು ದೂರು ಕೊಟ್ಟಿಲ್ಲ. ಯಾರಾದ್ರೂ ಬ್ಲಾಕ್ಮೇಲ್ ಒಳಗಾದವರು, ಸಂತ್ರಸ್ತರಿದ್ದರೆ ದೂರು ಕೊಟ್ಟರೆ ರೇಪ್ ಕೇಸು ದಾಖಲಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ರಿ ಪ್ರಕರಣದಲ್ಲಿ ಆರೋಪಿ ಜಾಮೀನು ಪಡೆದು ಬಿಡುಗಡೆಗೊಂಡಿದ್ದು ಯಾರಾದ್ರೂ ದೌರ್ಜನ್ಯಕ್ಕೊಳಗಾದವರಿದ್ದರೆ ದೂರು ಕೊಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
A major controversy has erupted in the coastal region after over 50 obscene video clips were allegedly found on the mobile phone of a Hindu Jagarana Vedike leader. An FIR has been registered against the accused, identified as Sumith Raj Daregudde, a prominent figure associated with the organization in Moodbidri.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm