ಬ್ರೇಕಿಂಗ್ ನ್ಯೂಸ್
08-07-25 10:15 am Mangalore Correspondent ಕರಾವಳಿ
ಮಂಗಳೂರು, ಜು.8 : ಪಿಯುಸಿ ಓದುತ್ತಿದ್ದ ಹುಡುಗ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಬಳಿ ನಡೆದಿದೆ. ತಂದೆ, ತಾಯಿ ಕೆಲಸಕ್ಕೆ ಹೋಗಿದ್ದರಿಂದ ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ.
ತುಂಬೆಯ ಪರ್ಲಕ್ಕೆ ನಿವಾಸಿಗಳಾದ ಕರುಣಾಕರ ಗಟ್ಟಿ ಮತ್ತು ಶೋಭಾ ಗಟ್ಟಿ ದಂಪತಿಯ ಏಕೈಕ ಪುತ್ರ ತೇಜಸ್ ಗಟ್ಟಿ(17) ಮೃತ ವಿದ್ಯಾರ್ಥಿ. ತೇಜಸ್ ಗಟ್ಟಿ ಮೊಡಂಕಾಪು ಕಾಲೇಜಿನಲ್ಲಿ ಪಿಯುಸಿ ಎರಡನೇ ವರುಷದ ವಿದ್ಯಾರ್ಥಿಯಾಗಿದ್ದ. ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ತೇಜಸ್ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಸಂಜೆ ವೇಳೆಗೆ ತಂದೆ ಕರುಣಾಕರ ಅವರು ಎಂದಿನಂತೆ ಮನೆಗೆ ಬಂದಾಗ ಬಾಗಿಲು ತೆರದಿದ್ದು ಒಳಗೆ ನೋಡಿದಾಗ ತೇಜಸ್ ಆತ್ಮಹತ್ಯೆಗೈದಿರೋದು ಗೊತ್ತಾಗಿದೆ.
ಕಳೆದ ಶನಿವಾರ ಕಾಲೇಜಿನಲ್ಲಿ ತೇಜಸ್ ಮೊಬೈಲ್ ಬಳಸಿ ಉಪನ್ಯಾಸಕರಿಗೆ ಸಿಕ್ಕಿಬಿದ್ದು, ಕಾಲೇಜು ಆಡಳಿತದವರು ಮೊಬೈಲ್ ವಶಪಡಿಸಿ ಪೋಷಕರಿಗೆ ವಿಚಾರ ತಿಳಿಸಿದ್ದರಂತೆ. ಕಾಲೇಜು ಆಡಳಿತವು ಸೋಮವಾರವೂ ಮೊಬೈಲನ್ನ ತೇಜಸ್ ಗೆ ವಾಪಸ್ ನೀಡಿರಲಿಲ್ಲವೆಂಬುವುದು ಒಂದು ನೆಪವಾಗಿದ್ದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ತಮಗೆ ಆಸರೆಯಾಗ ಬೇಕಿದ್ದ ಏಕೈಕ ಪುತ್ರ ಹದಿಹರೆಯದಲ್ಲೇ ಆತ್ಮಹತ್ಯೆಗೈದಿರುವುದನ್ನ ಅರಗಿಸಿಕೊಳ್ಳಲಾರದೆ ಪೋಷಕರು ದುಃಖ ಸಾಗರದಲ್ಲಿ ಮುಳುಗಿದ್ದಾರೆ.
In a heartbreaking incident reported from Thumbe near Mangaluru, a second-year PUC student allegedly died by suicide after returning home from college on Monday evening. The 17-year-old boy was found hanging from the ceiling fan in his room while his parents were away at work.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm