ಬ್ರೇಕಿಂಗ್ ನ್ಯೂಸ್
23-12-20 02:58 pm Mangalore Correspondent ಕರಾವಳಿ
ಉಳ್ಳಾಲ, ಡಿ.23: ಪಂಚಾಯತ್ ಚುನಾವಣೆ ಸಂದರ್ಭ ಹರೇಕಳದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧಿಸಿ ಎಸ್ ಡಿಪಿಐ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರತಿದೂರು ನೀಡಿದ್ದಾರೆ.
ಹರೇಕಳದ ರಾಮಕೃಷ್ಣ ಶಾಲೆಯ ಮತಗಟ್ಟೆ ಮುಂಭಾಗದಲ್ಲಿ ಚುನಾವಣಾ ಅಕ್ರಮದ ವಿಷಯ ಮುಂದಿಟ್ಟು SDPI - ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸಿದ ಪರಿಣಾಮ ಪೊಲೀಸರು ಲಾಠಿ ಬೀಸಿದ್ದರು. ಈ ವೇಳೆ, ಎಸ್ ಡಿಪಿಐ ಕಾರ್ಯಕರ್ತರ ಹಲ್ಲೆಯಿಂದ ಗಾಯಗೊಂಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತ ಝಕಾರಿಯಾ ಮಲಾರ್ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಎಸ್ ಡಿಪಿಐನ ಐಬು, ನ್ಯೂಮನ್, ಮುಬಾರಕ್ ಎಂಬ ಮೂವರ ವಿರುದ್ಧ ದೂರು ನೀಡಿದ್ದು , ಪ್ರಕರಣ ದಾಖಲಾಗಿತ್ತು.

ನಿನ್ನೆ ರಾತ್ರಿ ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದರು.

ಇದೇ ವೇಳೆ, ಎಸ್ ಡಿಪಿಐ ಕಾರ್ಯಕರ್ತ ಮುಬಾರಕ್ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಕಾಂಗ್ರೆಸ್ ಪಕ್ಷದ ನಾಲ್ವರು ಕಾರ್ಯಕರ್ತರಾದ ಝಕಾರಿಯ ಮಲಾರ್, ಇಮ್ತಿಯಾಝ್, ಬದ್ರುದ್ದೀನ್, ಇಮ್ತಿಯಾಝ್ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೂ ಪ್ರತಿದೂರು ದಾಖಲಾಗಿದೆ.
ಇದನ್ನೂ ಓದಿ: ಪಂಚಾಯತ್ ಫೈಟ್ ; ಹರೇಕಳದಲ್ಲಿ ಕಾಂಗ್ರೆಸ್-SDPI ನಡುವೆ ಘರ್ಷಣೆ, ಗುಂಪು ಚದುರಿಸಲು ಲಾಠಿಚಾರ್ಜ್ !
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕೊಣಾಜೆ ಠಾಣೆಗೆ ಮುತ್ತಿಗೆ
SDPI has filed a complaint against Congress at Konaje Police Station over class between the both in Arekala, Konaje Panchayat Elections 2020 in which police had to Lati charge.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am