ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm