ಬ್ರೇಕಿಂಗ್ ನ್ಯೂಸ್
12-07-25 01:42 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಸುರತ್ಕಲ್ ಬಳಿಯಿರುವ ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.
ಪೆಟ್ರೋ ಕೆಮಿಕಲ್ ಘಟಕದಲ್ಲಿ ಟ್ಯಾಂಕ್ ಗಳನ್ನು ಕ್ಲೀನ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮುಖ, ಕಣ್ಣಿಗೆ ಕವಚ ಧರಿಸಿ ಕಾರ್ಮಿಕರು ಟ್ಯಾಂಕ್ ಕ್ಲೀನಿಂಗ್ ಕೆಲಸ ಮಾಡುತ್ತಿದ್ದಾಗ ಮೂವರು ಗಂಭೀರ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಕಾರ್ಮಿಕರನ್ನು ಕೂಡಲೇ ಸುರತ್ಕಲ್ ಶ್ರೀನಿವಾಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.



ಮೃತರನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ದೀಪಚಂದ್ರ(33) ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಗದಗ ಮೂಲದ ವಿನಾಯಕ್ ಎಂಬ ಕಾರ್ಮಿಕನೂ ಅಸ್ವಸ್ಥಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋ ಕೆಮಿಕಲ್ಸ್ ಟ್ಯಾಂಕ್ ಗಳನ್ನು ಸಾಮಾನ್ಯವಾಗಿ ತಿಂಗಳಲ್ಲಿ ಒಂದು ಬಾರಿ ಕ್ಲೀನ್ ಮಾಡಲಾಗುತ್ತದೆ. ಅದೇ ರೀತಿ ಟ್ಯಾಂಕ್ ಕ್ಲೀನಿಂಗ್ ಮಾಡುತ್ತಿದ್ದಾಗ ಗ್ಯಾಸ್ ಸೇವನೆಗೊಳಗಾಗಿ ಕಾರ್ಮಿಕರು ಅಸ್ವಸ್ಥಕ್ಕೀಡಾಗಿದ್ದಾರೆ.
ಸದ್ಯಕ್ಕೆ ಎಂಆರ್ ಪಿಎಲ್ ಘಟಕದ ಸುರಕ್ಷತಾ ವಿಭಾಗದ ಅಧಿಕಾರಿಗಳು ಸೋರಿಕೆಯನ್ನು ನಿಲ್ಲಿಸಿದ್ದಾರೆ. ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಆರ್ ಪಿಎಲ್ ಒಳಗಡೆ ಏನೋ ಆಗಿದೆಯೆಂದು ಬೆಳಗ್ಗೆಯೇ ಸುದ್ದಿ ಹಬ್ಬಿತ್ತು. ಆದರೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಸಾವನ್ನಪ್ಪಿದ್ದನ್ನು ಪೊಲೀಸರೇ ದೃಢಪಡಿಸಿದ್ದಾರೆ.
In a tragic incident at the Mangalore Refinery and Petrochemicals Limited (MRPL) facility near Surathkal, two contract workers died and another was critically injured due to a suspected toxic gas leak while cleaning chemical storage tanks.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm