ಬ್ರೇಕಿಂಗ್ ನ್ಯೂಸ್
12-07-25 01:42 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಸುರತ್ಕಲ್ ಬಳಿಯಿರುವ ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.
ಪೆಟ್ರೋ ಕೆಮಿಕಲ್ ಘಟಕದಲ್ಲಿ ಟ್ಯಾಂಕ್ ಗಳನ್ನು ಕ್ಲೀನ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮುಖ, ಕಣ್ಣಿಗೆ ಕವಚ ಧರಿಸಿ ಕಾರ್ಮಿಕರು ಟ್ಯಾಂಕ್ ಕ್ಲೀನಿಂಗ್ ಕೆಲಸ ಮಾಡುತ್ತಿದ್ದಾಗ ಮೂವರು ಗಂಭೀರ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಕಾರ್ಮಿಕರನ್ನು ಕೂಡಲೇ ಸುರತ್ಕಲ್ ಶ್ರೀನಿವಾಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.



ಮೃತರನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ದೀಪಚಂದ್ರ(33) ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಗದಗ ಮೂಲದ ವಿನಾಯಕ್ ಎಂಬ ಕಾರ್ಮಿಕನೂ ಅಸ್ವಸ್ಥಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋ ಕೆಮಿಕಲ್ಸ್ ಟ್ಯಾಂಕ್ ಗಳನ್ನು ಸಾಮಾನ್ಯವಾಗಿ ತಿಂಗಳಲ್ಲಿ ಒಂದು ಬಾರಿ ಕ್ಲೀನ್ ಮಾಡಲಾಗುತ್ತದೆ. ಅದೇ ರೀತಿ ಟ್ಯಾಂಕ್ ಕ್ಲೀನಿಂಗ್ ಮಾಡುತ್ತಿದ್ದಾಗ ಗ್ಯಾಸ್ ಸೇವನೆಗೊಳಗಾಗಿ ಕಾರ್ಮಿಕರು ಅಸ್ವಸ್ಥಕ್ಕೀಡಾಗಿದ್ದಾರೆ.
ಸದ್ಯಕ್ಕೆ ಎಂಆರ್ ಪಿಎಲ್ ಘಟಕದ ಸುರಕ್ಷತಾ ವಿಭಾಗದ ಅಧಿಕಾರಿಗಳು ಸೋರಿಕೆಯನ್ನು ನಿಲ್ಲಿಸಿದ್ದಾರೆ. ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಆರ್ ಪಿಎಲ್ ಒಳಗಡೆ ಏನೋ ಆಗಿದೆಯೆಂದು ಬೆಳಗ್ಗೆಯೇ ಸುದ್ದಿ ಹಬ್ಬಿತ್ತು. ಆದರೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಸಾವನ್ನಪ್ಪಿದ್ದನ್ನು ಪೊಲೀಸರೇ ದೃಢಪಡಿಸಿದ್ದಾರೆ.
In a tragic incident at the Mangalore Refinery and Petrochemicals Limited (MRPL) facility near Surathkal, two contract workers died and another was critically injured due to a suspected toxic gas leak while cleaning chemical storage tanks.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm