ಬ್ರೇಕಿಂಗ್ ನ್ಯೂಸ್
12-07-25 01:42 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಸುರತ್ಕಲ್ ಬಳಿಯಿರುವ ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.
ಪೆಟ್ರೋ ಕೆಮಿಕಲ್ ಘಟಕದಲ್ಲಿ ಟ್ಯಾಂಕ್ ಗಳನ್ನು ಕ್ಲೀನ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮುಖ, ಕಣ್ಣಿಗೆ ಕವಚ ಧರಿಸಿ ಕಾರ್ಮಿಕರು ಟ್ಯಾಂಕ್ ಕ್ಲೀನಿಂಗ್ ಕೆಲಸ ಮಾಡುತ್ತಿದ್ದಾಗ ಮೂವರು ಗಂಭೀರ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಕಾರ್ಮಿಕರನ್ನು ಕೂಡಲೇ ಸುರತ್ಕಲ್ ಶ್ರೀನಿವಾಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.



ಮೃತರನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ದೀಪಚಂದ್ರ(33) ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಗದಗ ಮೂಲದ ವಿನಾಯಕ್ ಎಂಬ ಕಾರ್ಮಿಕನೂ ಅಸ್ವಸ್ಥಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋ ಕೆಮಿಕಲ್ಸ್ ಟ್ಯಾಂಕ್ ಗಳನ್ನು ಸಾಮಾನ್ಯವಾಗಿ ತಿಂಗಳಲ್ಲಿ ಒಂದು ಬಾರಿ ಕ್ಲೀನ್ ಮಾಡಲಾಗುತ್ತದೆ. ಅದೇ ರೀತಿ ಟ್ಯಾಂಕ್ ಕ್ಲೀನಿಂಗ್ ಮಾಡುತ್ತಿದ್ದಾಗ ಗ್ಯಾಸ್ ಸೇವನೆಗೊಳಗಾಗಿ ಕಾರ್ಮಿಕರು ಅಸ್ವಸ್ಥಕ್ಕೀಡಾಗಿದ್ದಾರೆ.
ಸದ್ಯಕ್ಕೆ ಎಂಆರ್ ಪಿಎಲ್ ಘಟಕದ ಸುರಕ್ಷತಾ ವಿಭಾಗದ ಅಧಿಕಾರಿಗಳು ಸೋರಿಕೆಯನ್ನು ನಿಲ್ಲಿಸಿದ್ದಾರೆ. ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಆರ್ ಪಿಎಲ್ ಒಳಗಡೆ ಏನೋ ಆಗಿದೆಯೆಂದು ಬೆಳಗ್ಗೆಯೇ ಸುದ್ದಿ ಹಬ್ಬಿತ್ತು. ಆದರೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಸಾವನ್ನಪ್ಪಿದ್ದನ್ನು ಪೊಲೀಸರೇ ದೃಢಪಡಿಸಿದ್ದಾರೆ.
In a tragic incident at the Mangalore Refinery and Petrochemicals Limited (MRPL) facility near Surathkal, two contract workers died and another was critically injured due to a suspected toxic gas leak while cleaning chemical storage tanks.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm