ಬ್ರೇಕಿಂಗ್ ನ್ಯೂಸ್
12-07-25 11:00 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಧರ್ಮಸ್ಥಳದಲ್ಲಿ ಹಲವು ಕೊಲೆಗಳನ್ನು ಮಾಡಿದ್ದು ಹೆಣಗಳನ್ನು ತಾನೇ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ತಾನು ಅಗೆದು ತೆಗೆದಿದ್ದೇನೆಂದು ಹೇಳಿರುವ ಅಸ್ಥಿಪಂಜರದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ನಡುವೆ, ಘಟನೆ ಕುರಿತಾಗಿ ಆಭಾಸಕರ ವರದಿ ಮಾಡಿರುವ ಬಗ್ಗೆ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಗಿದ್ದು ಉದ್ದೇಶಪೂರ್ವಕ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಅ.ಕ್ರ : 42/2025 ಕಲಂ: 192, 240, 353(1)(b) bNS ರಂತೆ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೆ, ಜುಲೈ 11ರಂದು ಸಾಕ್ಷಿ ದೂರುದಾರರ ಪರವಾದ ವಕೀಲರು ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಕೆಲವು ಹೇಳಿಕೆಗಳು ತಪ್ಪಾಗಿರುತ್ತದೆ ಎಂದು ದ.ಕ. ಎಸ್ಪಿ ಅರುಣ್ ಅಭಿಪ್ರಾಯ ಪಟ್ಟಿದ್ದಾರೆ. ಇದೇ ವೇಳೆ, ಸದ್ರಿ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಅಥವಾ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಹೇಳುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ದೂರುದಾರರ ಪರವಾದ ವಕೀಲರಿಗೆ ಅರಿವಿದೆಯೇ ಎಂಬುದನ್ನು ಹಾಗೂ ಈ ಬಗ್ಗೆ ಸಾಕ್ಷಿ ದೂರುದಾರರ ನಿಲುವೇನು ಎಂಬುದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಎಸ್ಪಿ ಪ್ರತಿಕ್ರಿಯಿಸಿದ್ದಾರೆ.
Police have registered another FIR against YouTuber Sameer M.D. in connection with the ongoing investigation into the controversial Dharmasthala case, where a man claimed to have buried multiple murder victims himself. Authorities have already recovered skeletal remains based on his statements, and the investigation is ongoing.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm